12:23 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪಳ್ಳಿ ಪಂಚಾಯತ್‌ನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ; ಓದುವ ಹವ್ಯಾಸ ಹೆಚ್ಚಾಗಲಿ: ಸಚಿವ ಸುನಿಲ್ ಕುಮಾರ್

19/10/2022, 12:30

ಕಾರ್ಕಳ(reporterkarnataka.com): ಉತ್ತಮ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ. ಮಕ್ಕಳಿಗೆ ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಡಿಜಿ ವಿಕಸನ , ಡೆಲ್ ಮತ್ತು ಶಿಕ್ಷಣ ಫೌಂಡೇಶನ್ ವತಿಯಿಂದ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಪ್ರತಿಯೊಂದು ಕ್ಷೇತ್ರಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಅಳವಡಿಕೆಯಾಗುತ್ತಿದ್ದು, ಮಹತ್ತರವಾದ ಬೆಳವಣಿಗೆಯಾಗುತ್ತಿದೆ. ಪಳ್ಳಿ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಕೂಡ ಡಿಜಿಟಲೀಕರಣವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದವರು ಹೇಳಿದರು.

ಪಂಚಾಯತ್ ಅಧ್ಯಕ್ಷ ಸಂದೀಪ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಫೌಂಡೇಷನ್‌ನ ಸಂಯೋಜಕಿ ರೀನಾ ಹೆಗ್ಡೆ ಅವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾಹಿತಿ ನೀಡಿದರು.
ಗ್ರಂಥಾಲಯದ ಮೇಲ್ವಿಚಾರಕಿ ಸುಷ್ಮಾ ನಾಯಕ್ ಮಾತನಾಡಿ, ಗ್ರಾಮ ಪಂಚಾಯತ್‌ನಿಂದ ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವಾಗುವಂತೆ ಒತ್ತು ನೀಡಲಾಗಿದೆ. ಪಂಚಾಯತ್‌ನ ೧೨ ರಿಂದ ೬೦ ವರ್ಷದ ವರೆಗಿನ ಸಾರ್ವಜನಿಕರಿಗೆ ಕಂಪ್ಯೂಟರ್, ಇಂಟರ್ನೆಟ್, ಬ್ಯಾಂಕ್ ವಹಿವಾಟು, ವೃತ್ತಿ ಮಾರ್ಗದರ್ಶನ, ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರತೀ ಭಾನುವಾರ ಪೂರ್ವಾಹ್ನ ೧೦ ರಿಂದ ೧೨ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋನಾಧಿಕಾರಿ ಬಾಬು, ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮಿ ಶೆಟ್ಟಿ, ಪಿಡಿಒ ಪ್ರಮೀಳಾ ನಾಯಕ್, ಪಂಚಾಯತ್‌ನ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಗ್ರಂಥಾಲಯದ ಶಿಕ್ಷಕಿ ಚೈತ್ರಾ ಸ್ವಾಗತಿಸಿ, ವಿಜಯಲಕ್ಷ್ಮೀ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು