1:40 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಪಳ್ಳಿ: ಯಕ್ಷಧ್ರುವ ಯಕ್ಷ ಶಿಕ್ಷಣದಿಂದ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ

19/06/2024, 19:07

ಕಾರ್ಕಳ(:reporterjarnataka.com): ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು.


ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಳ್ಳಿ ನಿಂಜೂರು ಘಟಕದ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣದ ಅಂಗವಾಗಿ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಕ್ಷಗಾನ ಪರಂಪರೆ ನಿರಂತರ ಮುಂದುವರಿಯಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆ ಜೊತೆಗೆ ಯಕ್ಷಗಾನ ಕಲಿಕೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವೂ ಸಾಧ್ಯ. ಶಿಕ್ಷಣದೊಂದಿಗೆ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹೆತ್ತವರು ಮತ್ತು ಶಿಕ್ಷಕರು ಮಾಡಬೇಕು ಎಂದು ಕಿಶನ್ ಹೆಗ್ಡೆ ಹೇಳಿದರು.
ವೇದಿಕೆಯಲ್ಲಿ ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಗದೀಶ್ ಹೆಗ್ಡೆ ಪೆಜಕೊಡಂಗೆ, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್, ಯಕ್ಷ ಗುರುಗಳಾದ ಮಹಾವೀರ್ ಪಾಂಡಿ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಬಂಗೇರ, ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷರು ಸುನಿಲ್ ಬಿ ಶೆಟ್ಟಿ, ಗ್ರಾ.ಪಂ. ಸದಸ್ಯ ಶ್ರೀಕಾಂತ್ ಪ್ರಭು, ಪ್ರಮುಖರಾದ ಮನೋಹರ್ ಶೆಟ್ಟಿ, ವಿಜಯ ಎಂ. ಶೆಟ್ಟಿ, ರಘುನಾಥ್ ಶೆಟ್ಟಿ, ಜಯರಾಮ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕಾಂತೇಶ್ ಶೆಟ್ಟಿ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ನಾಗರತ್ನ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರ ವಿನಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು