8:07 AM Monday5 - January 2026
ಬ್ರೇಕಿಂಗ್ ನ್ಯೂಸ್
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ…

ಇತ್ತೀಚಿನ ಸುದ್ದಿ

ಪಳ್ಳಿ: ಯಕ್ಷಧ್ರುವ ಯಕ್ಷ ಶಿಕ್ಷಣದಿಂದ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ

19/06/2024, 19:07

ಕಾರ್ಕಳ(:reporterjarnataka.com): ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು.


ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಳ್ಳಿ ನಿಂಜೂರು ಘಟಕದ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣದ ಅಂಗವಾಗಿ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಕ್ಷಗಾನ ಪರಂಪರೆ ನಿರಂತರ ಮುಂದುವರಿಯಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆ ಜೊತೆಗೆ ಯಕ್ಷಗಾನ ಕಲಿಕೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವೂ ಸಾಧ್ಯ. ಶಿಕ್ಷಣದೊಂದಿಗೆ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹೆತ್ತವರು ಮತ್ತು ಶಿಕ್ಷಕರು ಮಾಡಬೇಕು ಎಂದು ಕಿಶನ್ ಹೆಗ್ಡೆ ಹೇಳಿದರು.
ವೇದಿಕೆಯಲ್ಲಿ ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಗದೀಶ್ ಹೆಗ್ಡೆ ಪೆಜಕೊಡಂಗೆ, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್, ಯಕ್ಷ ಗುರುಗಳಾದ ಮಹಾವೀರ್ ಪಾಂಡಿ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಬಂಗೇರ, ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷರು ಸುನಿಲ್ ಬಿ ಶೆಟ್ಟಿ, ಗ್ರಾ.ಪಂ. ಸದಸ್ಯ ಶ್ರೀಕಾಂತ್ ಪ್ರಭು, ಪ್ರಮುಖರಾದ ಮನೋಹರ್ ಶೆಟ್ಟಿ, ವಿಜಯ ಎಂ. ಶೆಟ್ಟಿ, ರಘುನಾಥ್ ಶೆಟ್ಟಿ, ಜಯರಾಮ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕಾಂತೇಶ್ ಶೆಟ್ಟಿ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ನಾಗರತ್ನ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರ ವಿನಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು