9:30 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಪಳ್ಳಿ: ಯಕ್ಷಧ್ರುವ ಯಕ್ಷ ಶಿಕ್ಷಣದಿಂದ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ

19/06/2024, 19:07

ಕಾರ್ಕಳ(:reporterjarnataka.com): ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು.


ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಳ್ಳಿ ನಿಂಜೂರು ಘಟಕದ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣದ ಅಂಗವಾಗಿ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಕ್ಷಗಾನ ಪರಂಪರೆ ನಿರಂತರ ಮುಂದುವರಿಯಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆ ಜೊತೆಗೆ ಯಕ್ಷಗಾನ ಕಲಿಕೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವೂ ಸಾಧ್ಯ. ಶಿಕ್ಷಣದೊಂದಿಗೆ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹೆತ್ತವರು ಮತ್ತು ಶಿಕ್ಷಕರು ಮಾಡಬೇಕು ಎಂದು ಕಿಶನ್ ಹೆಗ್ಡೆ ಹೇಳಿದರು.
ವೇದಿಕೆಯಲ್ಲಿ ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಗದೀಶ್ ಹೆಗ್ಡೆ ಪೆಜಕೊಡಂಗೆ, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್, ಯಕ್ಷ ಗುರುಗಳಾದ ಮಹಾವೀರ್ ಪಾಂಡಿ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಬಂಗೇರ, ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷರು ಸುನಿಲ್ ಬಿ ಶೆಟ್ಟಿ, ಗ್ರಾ.ಪಂ. ಸದಸ್ಯ ಶ್ರೀಕಾಂತ್ ಪ್ರಭು, ಪ್ರಮುಖರಾದ ಮನೋಹರ್ ಶೆಟ್ಟಿ, ವಿಜಯ ಎಂ. ಶೆಟ್ಟಿ, ರಘುನಾಥ್ ಶೆಟ್ಟಿ, ಜಯರಾಮ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕಾಂತೇಶ್ ಶೆಟ್ಟಿ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ನಾಗರತ್ನ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರ ವಿನಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು