12:10 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಪಳ್ಳಿಕೆರೆ ಬಳಿ ಮಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು: ರೈಲ್ವೆ ಟ್ರ್ಯಾಕ್ ನಲ್ಲಿ ಮೃತದೇಹ ಪತ್ತೆ

08/01/2024, 17:42

ಕಾಸರಗೋಡು(reporterkarnataka.com): ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆ ಬಳಿ ರೈಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರಿಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ರಾತ್ರಿ ವೇಳೆ ಈಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯನ್ನು ಐಶ್ವರ್ಯ ಜೋಸೆಫ್(30) ಎಂದು ಗುರುತಿಸಲಾಗಿದೆ. ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆಯ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಬಳಿ ದೊರೆತ ಪರ್ಸ್ ನಲ್ಲಿ ಗುರುತು ಚೀಟಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಗುರುತಿಸಲಾಗಿದೆ. ಕಲ್ಲಿಕೋಟೆಯಲ್ಲಿ ಖಾಸಗಿ ಸಂಸ್ಥೆ ಯೊಂದರಲ್ಲಿ ಐಶ್ವರ್ಯ ಉದ್ಯೋಗ ಮಾಡುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು