5:35 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪಳ್ಳಿಕೆರೆ ಬಳಿ ಮಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು: ರೈಲ್ವೆ ಟ್ರ್ಯಾಕ್ ನಲ್ಲಿ ಮೃತದೇಹ ಪತ್ತೆ

08/01/2024, 17:42

ಕಾಸರಗೋಡು(reporterkarnataka.com): ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆ ಬಳಿ ರೈಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರಿಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ರಾತ್ರಿ ವೇಳೆ ಈಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯನ್ನು ಐಶ್ವರ್ಯ ಜೋಸೆಫ್(30) ಎಂದು ಗುರುತಿಸಲಾಗಿದೆ. ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆಯ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಬಳಿ ದೊರೆತ ಪರ್ಸ್ ನಲ್ಲಿ ಗುರುತು ಚೀಟಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಗುರುತಿಸಲಾಗಿದೆ. ಕಲ್ಲಿಕೋಟೆಯಲ್ಲಿ ಖಾಸಗಿ ಸಂಸ್ಥೆ ಯೊಂದರಲ್ಲಿ ಐಶ್ವರ್ಯ ಉದ್ಯೋಗ ಮಾಡುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು