2:02 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಪಣಂಬೂರು ಎನ್ ಎಂಪಿಟಿ ಸ್ಕೂಲ್ ಶಿಕ್ಷಕ ರಕ್ಷಕ ಸಂಘದ ಸಭೆ: ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

23/07/2023, 22:41

ಮಂಗಳೂರು(reporterkarnataka.com):ಹೆತ್ತವರು ಮಗುವಿನಲ್ಲಿ ಹುದುಗಿರುವ ಪ್ರತಿಭೆ ಸಾಮರ್ಥ್ಯ ಗಳನ್ನು ಬೆಳೆಸಬೇಕೇ ಹೊರತು ಅವರ ಮೇಲೆ ಒತ್ತಡ ಹೇರಬಾರದು. ಸಕಾರಾತ್ಮಕ ಮಾತುಗಳನ್ನು ಆಡುವಂತೆ ಮಕ್ಕಳಲ್ಲಿ ಜಾಗೃತಿಯನ್ನು ತರಬೇಕು ಎಂದು ಮಾನಸಿಕ ಆರೋಗ್ಯ ತಜ್ಞೆ ಡಾ. ರಮೀಲಾ ಶೇಖರ್ ಹೇಳಿದರು.

ಅವರು, ಪಣಂಬೂರು ಎನ್ ಎಂಪಿಟಿ ಸ್ಕೂಲಿನ
ಶಿಕ್ಷಕ- ರಕ್ಷಕ ಸಂಘದ ಸಭೆಯಲ್ಲಿ ಮಾತನಾಡಿದರು.
ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸಿ ಹೃದಯವಂತರಾಗಬೇಕು. ಪ್ರತಿ ಮಗುವು ತನ್ನ ಭಾವನೆಗಳನ್ನು ಹೆತ್ತವರೊಂದಿಗೆ ಹಂಚಿಕೊಳ್ಳಲು ಬಯಸುತ್ತದೆ. ಆದ್ದರಿಂದ ಪೋಷಕರು ಮಕ್ಕಳೊಂದಿಗೆ ಕಾಲ ಕಳೆಯಲು ಸಮಯ ಮೀಸಲಿಟ್ಟರೆ ಬಾಹ್ಯ ಪ್ರೀತಿ ಪ್ರೇಮಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು. ಹೆತ್ತವರು ಮತ್ತು ಶಿಕ್ಷಕರು ಮಕ್ಕಳನ್ನು ಪ್ರೀತಿಸಿ ಗುರುತಿಸಿ ತಾಳ್ಮೆಯಿಂದ ಪ್ರೋತ್ಸಾಹಿಸಿದರೆ ಮಕ್ಕಳ ಮನಸ್ಸು ಹೂವಿನಂತೆ ಅರಳುತ್ತದೆ ಎಂದು ಅವರು ನುಡಿದರು.
ಬದುಕಿನಲ್ಲಿ ಸಂಸ್ಕಾರಯುತ ಮೌಲ್ಯಗಳನ್ನು ಗೆಲುವಿನ ಹಾದಿಯಲ್ಲಿ ಸಾಗುವ ಛಲ ವಿದ್ಯಾರ್ಥಿಗಳಲ್ಲಿದ್ದರೆ ಯಶಸ್ಸು ಸಾಧಿಸಬಹುದು. ಪೋಷಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು ಎಂದು ಎನ್ ಎಂ ಪಿ ಟಿ ಶಿಕ್ಷಣ ಸೊಸೈಟಿಯ ಉಪಾಧ್ಯಕ್ಷ ಕೃಷ್ಣ ಬಾಪಿ ಆರ್.ಜೆ. ಹೇಳಿದರು.
ಎನ್ ಎಂ ಪಿ ಟಿ ಶಿಕ್ಷಣ ಸೊಸೈಟಿಯ ಕಾರ್ಯದರ್ಶಿ ಶ್ರೀನಾಥ್ ಪಿ. , ಮುಖ್ಯ ಶಿಕ್ಷಕಿ ಪ್ರತಿಮಾ ಎಂ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಉಸ್ಮಾನ್ , ಕಾರ್ಯದರ್ಶಿ ಯೋಗೀಶ್ ಕಾಂಚನ್ , ಶಿಕ್ಷಕಿ ರೋಸ್ ಮೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್.ಎಸ್. ಎಲ್. ಸಿ. ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಉಸ್ಮಾನ್ ಯೋಗೀಶ್ ಕಾಂಚನ್ ವನಿತಾ ಇವರನ್ನು ಸನ್ಮಾನಿಸಲಾಯಿತು. ಯೋಗೀಶ್ ಕಾಂಚನ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪ್ರತಿಮಾ ಎಮ್. ವರದಿ ಮಂಡಿಸಿದರು. ಅನಿತಾ ಕಾರ್ಯಕ್ರಮ ನಿರೂಪಿಸಿ ಸಿ. ಆರ್. ಭಾರತಿ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು