5:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪಣಂಬೂರು ಎನ್ ಎಂಪಿಟಿ ಸ್ಕೂಲ್ ಶಿಕ್ಷಕ ರಕ್ಷಕ ಸಂಘದ ಸಭೆ: ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

23/07/2023, 22:41

ಮಂಗಳೂರು(reporterkarnataka.com):ಹೆತ್ತವರು ಮಗುವಿನಲ್ಲಿ ಹುದುಗಿರುವ ಪ್ರತಿಭೆ ಸಾಮರ್ಥ್ಯ ಗಳನ್ನು ಬೆಳೆಸಬೇಕೇ ಹೊರತು ಅವರ ಮೇಲೆ ಒತ್ತಡ ಹೇರಬಾರದು. ಸಕಾರಾತ್ಮಕ ಮಾತುಗಳನ್ನು ಆಡುವಂತೆ ಮಕ್ಕಳಲ್ಲಿ ಜಾಗೃತಿಯನ್ನು ತರಬೇಕು ಎಂದು ಮಾನಸಿಕ ಆರೋಗ್ಯ ತಜ್ಞೆ ಡಾ. ರಮೀಲಾ ಶೇಖರ್ ಹೇಳಿದರು.

ಅವರು, ಪಣಂಬೂರು ಎನ್ ಎಂಪಿಟಿ ಸ್ಕೂಲಿನ
ಶಿಕ್ಷಕ- ರಕ್ಷಕ ಸಂಘದ ಸಭೆಯಲ್ಲಿ ಮಾತನಾಡಿದರು.
ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸಿ ಹೃದಯವಂತರಾಗಬೇಕು. ಪ್ರತಿ ಮಗುವು ತನ್ನ ಭಾವನೆಗಳನ್ನು ಹೆತ್ತವರೊಂದಿಗೆ ಹಂಚಿಕೊಳ್ಳಲು ಬಯಸುತ್ತದೆ. ಆದ್ದರಿಂದ ಪೋಷಕರು ಮಕ್ಕಳೊಂದಿಗೆ ಕಾಲ ಕಳೆಯಲು ಸಮಯ ಮೀಸಲಿಟ್ಟರೆ ಬಾಹ್ಯ ಪ್ರೀತಿ ಪ್ರೇಮಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು. ಹೆತ್ತವರು ಮತ್ತು ಶಿಕ್ಷಕರು ಮಕ್ಕಳನ್ನು ಪ್ರೀತಿಸಿ ಗುರುತಿಸಿ ತಾಳ್ಮೆಯಿಂದ ಪ್ರೋತ್ಸಾಹಿಸಿದರೆ ಮಕ್ಕಳ ಮನಸ್ಸು ಹೂವಿನಂತೆ ಅರಳುತ್ತದೆ ಎಂದು ಅವರು ನುಡಿದರು.
ಬದುಕಿನಲ್ಲಿ ಸಂಸ್ಕಾರಯುತ ಮೌಲ್ಯಗಳನ್ನು ಗೆಲುವಿನ ಹಾದಿಯಲ್ಲಿ ಸಾಗುವ ಛಲ ವಿದ್ಯಾರ್ಥಿಗಳಲ್ಲಿದ್ದರೆ ಯಶಸ್ಸು ಸಾಧಿಸಬಹುದು. ಪೋಷಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು ಎಂದು ಎನ್ ಎಂ ಪಿ ಟಿ ಶಿಕ್ಷಣ ಸೊಸೈಟಿಯ ಉಪಾಧ್ಯಕ್ಷ ಕೃಷ್ಣ ಬಾಪಿ ಆರ್.ಜೆ. ಹೇಳಿದರು.
ಎನ್ ಎಂ ಪಿ ಟಿ ಶಿಕ್ಷಣ ಸೊಸೈಟಿಯ ಕಾರ್ಯದರ್ಶಿ ಶ್ರೀನಾಥ್ ಪಿ. , ಮುಖ್ಯ ಶಿಕ್ಷಕಿ ಪ್ರತಿಮಾ ಎಂ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಉಸ್ಮಾನ್ , ಕಾರ್ಯದರ್ಶಿ ಯೋಗೀಶ್ ಕಾಂಚನ್ , ಶಿಕ್ಷಕಿ ರೋಸ್ ಮೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್.ಎಸ್. ಎಲ್. ಸಿ. ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಉಸ್ಮಾನ್ ಯೋಗೀಶ್ ಕಾಂಚನ್ ವನಿತಾ ಇವರನ್ನು ಸನ್ಮಾನಿಸಲಾಯಿತು. ಯೋಗೀಶ್ ಕಾಂಚನ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪ್ರತಿಮಾ ಎಮ್. ವರದಿ ಮಂಡಿಸಿದರು. ಅನಿತಾ ಕಾರ್ಯಕ್ರಮ ನಿರೂಪಿಸಿ ಸಿ. ಆರ್. ಭಾರತಿ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು