4:26 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ: ಕಾಂಗ್ರೆಸ್ ಗೆ ಮತ್ತೆ ಹೀನಾಯ ಸೋಲು: 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಗೋವಾ ಅತಂತ್ರ 

10/03/2022, 11:40

ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಈ ಬಾರಿಯೂ ಕಾಂಗ್ರೆಸ್ ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ pಹೀನಾಯ ಸೋಲು ಅನುಭವಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. ಗೋವಾದಲ್ಲಿ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದರೂ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 16, ಎಎಪಿ 2 ಮತ್ತು ಇತರರು 3 ಸ್ಥಾನಗಳನ್ನು ಪಡೆದಿದ್ದಾರೆ. ಇಲ್ಲಿ ಸರಕಾರ ರಚನೆ ಇತರರನ್ನು ಅವಲಂಬಿಸಿದೆ.

ಉತ್ತರಾಖಂಡ್ ನ 70 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಬಾಚಿಕೊಂಡಿದೆ. ಕಾಂಗ್ರೆಸ್ 21 ಹಾಗೂ ಇತರರು 5 ಸ್ಥಾನಗಳನ್ನು ಪಡೆದಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳ ಪೈಕಿ ಆಮ್ ಆದ್ಮಿ ಪಾರ್ಟಿ 85 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ದಾಖಲಿಸಿದೆ. ಕಾಂಗ್ರೆಸ್ 16, ಬಿಜೆಪಿ 6 ಮತ್ತು ಎಸ್ ಎಡಿ 9 ಸ್ಥಾನಗಳನ್ನು ಪಡೆದಿದೆ. ಮಣಿಪುರದ 60 ಸ್ಥಾನಗಳ ಪೈಕಿ 44 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 21, ಎನ್ ಪಿಪಿಇ 8, ಎನ್ ಪಿಎಫ್ 4ಮತ್ತು ಇತರರು 6 ಸ್ಥಾನಗಳನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು