12:42 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ: ಕಾಂಗ್ರೆಸ್ ಗೆ ಮತ್ತೆ ಹೀನಾಯ ಸೋಲು: 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಗೋವಾ ಅತಂತ್ರ 

10/03/2022, 11:40

ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಈ ಬಾರಿಯೂ ಕಾಂಗ್ರೆಸ್ ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ pಹೀನಾಯ ಸೋಲು ಅನುಭವಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. ಗೋವಾದಲ್ಲಿ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದರೂ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 16, ಎಎಪಿ 2 ಮತ್ತು ಇತರರು 3 ಸ್ಥಾನಗಳನ್ನು ಪಡೆದಿದ್ದಾರೆ. ಇಲ್ಲಿ ಸರಕಾರ ರಚನೆ ಇತರರನ್ನು ಅವಲಂಬಿಸಿದೆ.

ಉತ್ತರಾಖಂಡ್ ನ 70 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಬಾಚಿಕೊಂಡಿದೆ. ಕಾಂಗ್ರೆಸ್ 21 ಹಾಗೂ ಇತರರು 5 ಸ್ಥಾನಗಳನ್ನು ಪಡೆದಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳ ಪೈಕಿ ಆಮ್ ಆದ್ಮಿ ಪಾರ್ಟಿ 85 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ದಾಖಲಿಸಿದೆ. ಕಾಂಗ್ರೆಸ್ 16, ಬಿಜೆಪಿ 6 ಮತ್ತು ಎಸ್ ಎಡಿ 9 ಸ್ಥಾನಗಳನ್ನು ಪಡೆದಿದೆ. ಮಣಿಪುರದ 60 ಸ್ಥಾನಗಳ ಪೈಕಿ 44 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 21, ಎನ್ ಪಿಪಿಇ 8, ಎನ್ ಪಿಎಫ್ 4ಮತ್ತು ಇತರರು 6 ಸ್ಥಾನಗಳನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು