3:52 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ: ಕಾಂಗ್ರೆಸ್ ಗೆ ಮತ್ತೆ ಹೀನಾಯ ಸೋಲು: 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಗೋವಾ ಅತಂತ್ರ 

10/03/2022, 11:40

ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಈ ಬಾರಿಯೂ ಕಾಂಗ್ರೆಸ್ ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ pಹೀನಾಯ ಸೋಲು ಅನುಭವಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. ಗೋವಾದಲ್ಲಿ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದರೂ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 16, ಎಎಪಿ 2 ಮತ್ತು ಇತರರು 3 ಸ್ಥಾನಗಳನ್ನು ಪಡೆದಿದ್ದಾರೆ. ಇಲ್ಲಿ ಸರಕಾರ ರಚನೆ ಇತರರನ್ನು ಅವಲಂಬಿಸಿದೆ.

ಉತ್ತರಾಖಂಡ್ ನ 70 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಬಾಚಿಕೊಂಡಿದೆ. ಕಾಂಗ್ರೆಸ್ 21 ಹಾಗೂ ಇತರರು 5 ಸ್ಥಾನಗಳನ್ನು ಪಡೆದಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳ ಪೈಕಿ ಆಮ್ ಆದ್ಮಿ ಪಾರ್ಟಿ 85 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ದಾಖಲಿಸಿದೆ. ಕಾಂಗ್ರೆಸ್ 16, ಬಿಜೆಪಿ 6 ಮತ್ತು ಎಸ್ ಎಡಿ 9 ಸ್ಥಾನಗಳನ್ನು ಪಡೆದಿದೆ. ಮಣಿಪುರದ 60 ಸ್ಥಾನಗಳ ಪೈಕಿ 44 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 21, ಎನ್ ಪಿಪಿಇ 8, ಎನ್ ಪಿಎಫ್ 4ಮತ್ತು ಇತರರು 6 ಸ್ಥಾನಗಳನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು