1:45 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? 

10/03/2022, 15:58

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಅಧಿಕಾರ ವಿರೋಧಿ ಅಲೆಯ ನಡುವೆಯಲ್ಲೂ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 5 ರಾಜ್ಯಗಳ ಪೈಕಿ 4ರಲ್ಲಿ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಮಾತ್ರ ಅಧಿಕಾರದ ಗದ್ದುಗೆ ಏರಲು ಒಂದು ಸ್ಥಾನದ ಕೊರತೆ ಅನುಭವಿಸುತ್ತಿದೆ. ಪಂಜಾಬ್ ನಲ್ಲಿ ಮಾತ್ರ ಸಂಪೂರ್ಣ ನೆಲಕಚ್ಚಿ ಹೋಗಿದೆ. ಒಟ್ಟಾರೆಯಾಗಿ ಬಿಜೆಪಿ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ.

ಪಂಚ ರಾಜ್ಯದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪರ ಅಲೆ ಇರುವಾಗಲೇ ಚುನಾವಣೆ ಮಾಡಿ ಮುಗಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯ ವಿಧಾನ ಸಭೆಯನ್ನು ಅವಧಿಗೆ ಮುನ್ನ ವಿಸರ್ಜಿಸಿ ಚುನಾವಣೆಗೆ ಹೋಗಲು ಸಾಧ್ಯವಾಗುತ್ತದೆ. ರಾಜ್ಯ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ ಮಾಡಿದರಾಯಿತು. ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವ ಪ್ರಕ್ರಿಯೆ ನಡೆಸುತ್ತಾರೆ. ನಂತರ ಚುನಾವಣಾ ಆಯೋಗ ಎಲೆಕ್ಷನ್ ಗೆ ದಿನ ನಿಗದಿಪಡಿಸಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು