4:28 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? 

10/03/2022, 15:58

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಅಧಿಕಾರ ವಿರೋಧಿ ಅಲೆಯ ನಡುವೆಯಲ್ಲೂ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 5 ರಾಜ್ಯಗಳ ಪೈಕಿ 4ರಲ್ಲಿ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಮಾತ್ರ ಅಧಿಕಾರದ ಗದ್ದುಗೆ ಏರಲು ಒಂದು ಸ್ಥಾನದ ಕೊರತೆ ಅನುಭವಿಸುತ್ತಿದೆ. ಪಂಜಾಬ್ ನಲ್ಲಿ ಮಾತ್ರ ಸಂಪೂರ್ಣ ನೆಲಕಚ್ಚಿ ಹೋಗಿದೆ. ಒಟ್ಟಾರೆಯಾಗಿ ಬಿಜೆಪಿ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ.

ಪಂಚ ರಾಜ್ಯದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪರ ಅಲೆ ಇರುವಾಗಲೇ ಚುನಾವಣೆ ಮಾಡಿ ಮುಗಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯ ವಿಧಾನ ಸಭೆಯನ್ನು ಅವಧಿಗೆ ಮುನ್ನ ವಿಸರ್ಜಿಸಿ ಚುನಾವಣೆಗೆ ಹೋಗಲು ಸಾಧ್ಯವಾಗುತ್ತದೆ. ರಾಜ್ಯ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ ಮಾಡಿದರಾಯಿತು. ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವ ಪ್ರಕ್ರಿಯೆ ನಡೆಸುತ್ತಾರೆ. ನಂತರ ಚುನಾವಣಾ ಆಯೋಗ ಎಲೆಕ್ಷನ್ ಗೆ ದಿನ ನಿಗದಿಪಡಿಸಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು