3:25 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? 

10/03/2022, 15:58

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಅಧಿಕಾರ ವಿರೋಧಿ ಅಲೆಯ ನಡುವೆಯಲ್ಲೂ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 5 ರಾಜ್ಯಗಳ ಪೈಕಿ 4ರಲ್ಲಿ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಮಾತ್ರ ಅಧಿಕಾರದ ಗದ್ದುಗೆ ಏರಲು ಒಂದು ಸ್ಥಾನದ ಕೊರತೆ ಅನುಭವಿಸುತ್ತಿದೆ. ಪಂಜಾಬ್ ನಲ್ಲಿ ಮಾತ್ರ ಸಂಪೂರ್ಣ ನೆಲಕಚ್ಚಿ ಹೋಗಿದೆ. ಒಟ್ಟಾರೆಯಾಗಿ ಬಿಜೆಪಿ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ.

ಪಂಚ ರಾಜ್ಯದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪರ ಅಲೆ ಇರುವಾಗಲೇ ಚುನಾವಣೆ ಮಾಡಿ ಮುಗಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯ ವಿಧಾನ ಸಭೆಯನ್ನು ಅವಧಿಗೆ ಮುನ್ನ ವಿಸರ್ಜಿಸಿ ಚುನಾವಣೆಗೆ ಹೋಗಲು ಸಾಧ್ಯವಾಗುತ್ತದೆ. ರಾಜ್ಯ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ ಮಾಡಿದರಾಯಿತು. ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವ ಪ್ರಕ್ರಿಯೆ ನಡೆಸುತ್ತಾರೆ. ನಂತರ ಚುನಾವಣಾ ಆಯೋಗ ಎಲೆಕ್ಷನ್ ಗೆ ದಿನ ನಿಗದಿಪಡಿಸಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು