11:20 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? 

10/03/2022, 15:58

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಅಧಿಕಾರ ವಿರೋಧಿ ಅಲೆಯ ನಡುವೆಯಲ್ಲೂ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 5 ರಾಜ್ಯಗಳ ಪೈಕಿ 4ರಲ್ಲಿ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಮಾತ್ರ ಅಧಿಕಾರದ ಗದ್ದುಗೆ ಏರಲು ಒಂದು ಸ್ಥಾನದ ಕೊರತೆ ಅನುಭವಿಸುತ್ತಿದೆ. ಪಂಜಾಬ್ ನಲ್ಲಿ ಮಾತ್ರ ಸಂಪೂರ್ಣ ನೆಲಕಚ್ಚಿ ಹೋಗಿದೆ. ಒಟ್ಟಾರೆಯಾಗಿ ಬಿಜೆಪಿ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ.

ಪಂಚ ರಾಜ್ಯದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪರ ಅಲೆ ಇರುವಾಗಲೇ ಚುನಾವಣೆ ಮಾಡಿ ಮುಗಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯ ವಿಧಾನ ಸಭೆಯನ್ನು ಅವಧಿಗೆ ಮುನ್ನ ವಿಸರ್ಜಿಸಿ ಚುನಾವಣೆಗೆ ಹೋಗಲು ಸಾಧ್ಯವಾಗುತ್ತದೆ. ರಾಜ್ಯ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ ಮಾಡಿದರಾಯಿತು. ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವ ಪ್ರಕ್ರಿಯೆ ನಡೆಸುತ್ತಾರೆ. ನಂತರ ಚುನಾವಣಾ ಆಯೋಗ ಎಲೆಕ್ಷನ್ ಗೆ ದಿನ ನಿಗದಿಪಡಿಸಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು