6:19 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? 

10/03/2022, 15:58

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಅಧಿಕಾರ ವಿರೋಧಿ ಅಲೆಯ ನಡುವೆಯಲ್ಲೂ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 5 ರಾಜ್ಯಗಳ ಪೈಕಿ 4ರಲ್ಲಿ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಮಾತ್ರ ಅಧಿಕಾರದ ಗದ್ದುಗೆ ಏರಲು ಒಂದು ಸ್ಥಾನದ ಕೊರತೆ ಅನುಭವಿಸುತ್ತಿದೆ. ಪಂಜಾಬ್ ನಲ್ಲಿ ಮಾತ್ರ ಸಂಪೂರ್ಣ ನೆಲಕಚ್ಚಿ ಹೋಗಿದೆ. ಒಟ್ಟಾರೆಯಾಗಿ ಬಿಜೆಪಿ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ.

ಪಂಚ ರಾಜ್ಯದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪರ ಅಲೆ ಇರುವಾಗಲೇ ಚುನಾವಣೆ ಮಾಡಿ ಮುಗಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯ ವಿಧಾನ ಸಭೆಯನ್ನು ಅವಧಿಗೆ ಮುನ್ನ ವಿಸರ್ಜಿಸಿ ಚುನಾವಣೆಗೆ ಹೋಗಲು ಸಾಧ್ಯವಾಗುತ್ತದೆ. ರಾಜ್ಯ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ ಮಾಡಿದರಾಯಿತು. ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವ ಪ್ರಕ್ರಿಯೆ ನಡೆಸುತ್ತಾರೆ. ನಂತರ ಚುನಾವಣಾ ಆಯೋಗ ಎಲೆಕ್ಷನ್ ಗೆ ದಿನ ನಿಗದಿಪಡಿಸಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು