12:51 PM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಪಂಚಮಸಾಲಿ ಮೀಸಲಾತಿ; ಬಿಎಸ್ ವೈ ಮಾನಸ ಪುತ್ರ, ಸಿಎಂ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ

27/09/2022, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.   ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಅವರು ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಕೂಡಿಸಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು, ಬಿಎಸ್ ವೈ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಬಿಎಸ್ ವೈ ಅವರಿಗೆ ಸಲಹೆ ನೀಡಿದರು.

ಮುಖ್ಯಮಂತ್ರಿನವರು ಬರುವ ಸಚಿವ ಸಂಪುಟದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದೆಂದು ಬರವಸೆ ನೀಡಿದ್ದಾರೆ, ಇದಕ್ಕೂ ಅವರು ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆಯನ್ನು ನೀಡಿದರು. ಕೊನೆ ಹಂತದ ಪ್ರತಿಭಟನೆ ಆಗಿದ್ದರಿಂದ ಮಾಡು ಇಲ್ಲವೇ ಮಡಿ, ಮಡಿಯುವ ಮುನ್ನ ಮೀಸಲಾತಿ ಪಡಿ ಎಂಬ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು