1:23 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಪಂಚಮಸಾಲಿ ಪ್ರತಿಭಟನೆ; ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ಸರಕಾರ ಜವಾಬ್ದಾರಿ ನಿಬಾಯಿಸಿದೆ: ಗೃಹ ಸಚಿವ ಡಾ. ಪರಮೇಶ್ವರ್

13/12/2024, 08:18

ಬೆಳಗಾವಿ(reporterkarnataka.com): ಕಳೆದ ಡಿ. 10 ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಜರುಗಿದ ಲಾಠಿ ಚಾರ್ಜ್ ನಂತಹ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಪಾಲನೆ ಉದ್ದೇಶದಿಂದ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿಯೇ ನಿಭಾಯಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆ ಸಭಾಂಗಣದಲ್ಲಿ ಗುರುವಾರದಂದು ಪಂಚಮಸಾಲಿ ಮೀಸಲಾತಿ ಪ್ರತಿಭಟನೆಯ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಅವರು, ನಾನು ಕಳೆದ ಡಿ. 10ರಂದು ನಡೆದ ಘಟನೆಗೆ ಸೀಮಿತಗೊಳಿಸಿ ನನ್ನ ಹೇಳಿಕೆ ನೀಡುತ್ತಿದ್ದು, ಮೀಸಲಾತಿ ವಿಷಯದ ಬಗ್ಗೆ ಮಾತನಾಡುವುದಿಲ್ಲ. ಡಿ. 9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಬಗ್ಗೆ ಘೋಷಣೆಯಾದ ಬಳಿಕ ಜಯ ಮೃತ್ಯುಂಜಯ ಸ್ವಾಮೀಜಿಯವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕುರಿತಂತೆ ಬೆಳಗಾವಿಯಲ್ಲಿ 5 ಸಾವಿರ ಟ್ರ್ಯಾಕ್ಟರ್ ತಂದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕರೆ ಕೊಟ್ಟಿದ್ದರು. ಪ್ರತಿಭಟನೆ ಮಾಡುವುದು ಎಲ್ಲರ ಹಕ್ಕಾಗಿದ್ದು, ಆದರೆ 5 ಸಾವಿರ ಟ್ರಾö್ಯಕ್ಟರ್‌ಗಳನ್ನು ಬೆಳಗಾವಿಗೆ ತಂದರೆ ಏನಾಗುತ್ತದೆ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಬಳಿಕ ಟ್ರ್ಯಾಕ್ಟರ್‌ನಲ್ಲಿ ಬರಲು ಅವಕಾಶ ನಿರಾಕರಿಸಿ, ಟ್ರಾö್ಯಕ್ಸ್ ಅಥವಾ ಕ್ರೂಸರ್ ವಾಹನಗಳಲ್ಲಿ ಬಂದು, ಪ್ರತಿಭಟನೆ ಮಾಡಲು ಸ್ಥಳ ನಿಗದಿ ಮಾಡಿಕೊಟ್ಟಿದ್ದೆವು. ಅಲ್ಲದೆ ಸುವರ್ಣ ವಿಧಾನಸೌಧದ 500 ಮೀ. ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ, ನಿರ್ಬಂಧಿತ ಪ್ರದೇಶದ ಬಗ್ಗೆಯೂ ಆದೇಶ ಹೊರಡಿಸಲಾಗಿತ್ತು. ಪ್ರತಿಭಟನೆ ಸಂಬಂಧ ಧಾರವಾಡ ಹೈಕೋರ್ಟ್ ಕೂಡ ಶಾಂತಿಯುತ ಪ್ರತಿಭಟನೆಗೆ ಸ್ಥಳವನ್ನು ನಿಗದಿಪಡಿಸಿ, ಅವಕಾಶ ಕಲ್ಪಿಸಲು ಮತ್ತು ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು. ಸ್ವತಃ ಮುಖ್ಯಮಂತ್ರಿಗಳು ಕೂಡ, ಸಚಿವರುಗಳಾದ ಡಾ. ಮಹದೇವಪ್ಪ, ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವೆಂಕಟೇಶ್ ಅವರನ್ನು ಪ್ರತಿಭಟನಾ ಸ್ಥಳಕ್ಕೆ ತೆರಳಿ, ಸ್ವಾಮೀಜಿಗಳೂ ಸೇರಿದಂತೆ, ಕೆಲವು ಮುಖಂಡರುಗಳನ್ನು ಭೇಟಿಯಾಗಿ, ಮಾತುಕತೆಗೆ ಬರುವಂತೆ ಆಹ್ವಾನಿಸಲು ತಿಳಿಸಿದ್ದರು. ಆದರೆ, ಮುಖಂಡರುಗಳು ಸಚಿವರುಗಳ ಮಾತಿಗೆ ಸ್ಪಂದಿಸದೆ, ಮುಖ್ಯಮಂತ್ರಿಗಳೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು. ಎಲ್ಲ ಪ್ರತಿಭಟನೆಗಳಿಗೂ ಮುಖ್ಯಮಂತ್ರಿಗಳೇ ಹೋಗಬೇಕು ಎಂದರೆ ಅದು ಸಾಧ್ಯವೆ? ಎಂದು ಡಾ. ಪರಮೇಶ್ವರ್ ಅವರು ಪ್ರಶ್ನಿಸಿದರು.
ಪ್ರತಿಭಟನಾಕಾರರನ್ನು ಸುವರ್ಣ ವಿಧಾನಸೌಧದೆಡೆಗೆ ನುಗ್ಗಲು ಪ್ರಚೋದಿಸಿದ ಕಾರಣ, ಪೊಲೀಸ್ ಬ್ಯಾರಿಕೇಡ್‌ಗಳನ್ನು ನೂಕಿ, ಸುವರ್ಣ ವಿಧಾನಸೌಧದೆಡೆಗೆ ಸುಮಾರು 10 ಸಾವಿರ ಜನರು ಏಕಕಾಲಕ್ಕೆ ನುಗ್ಗಲು ಯತ್ನಿಸಿದರು, ಅಲ್ಲದೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಕಾರಣ 24 ಪೊಲೀಸರು ಗಾಯಗೊಂಡರು. ಈ ಬಗ್ಗೆ ಸೂಕ್ತ ವಿಡಿಯೋ ದಾಖಲೆಗಳು ಇವೆ. 10 ಸಾವಿರ ಜನ ಸುವರ್ಣ ವಿಧಾನಸೌಧದೆಡೆಗೆ ನುಗ್ಗಿದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂಬ ಕಾರಣಕ್ಕಾಗಿಯೇ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ, ಅದನ್ನು ತಡೆದಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ವಿರೋಧ ಪಕ್ಷದವರು ಕೂಡ ಪ್ರಶ್ನೆ ಮಾಡುತ್ತಾರೆ, ಅಲ್ಲವೇ ಎಂದ ಅವರು, ಜವಾಬ್ದಾರಿಯುತವಾದ ಸರ್ಕಾರ ನಮ್ಮದು. ಪ್ರತಿಭಟನೆ ಎಲ್ಲರ ಹಕ್ಕು, ಆದರೆ ಶಾಂತಿಯುತವಾಗಿ ಮಾಡಬೇಕು.ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ, ಯಾರೇ ಕಾನೂನು ಉಲ್ಲಂಘಿಸಲು ಅವಕಾಶ ಕೊಡುವುದಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಜವಾಬ್ದಾರಿಯುತವಾಗಿಯೇ ವರ್ತಿಸಿದ್ದಾರೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು