1:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಪಂಡರಾಪುರ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರ ಭೇಟಿ: ಸ್ವರ್ಣಹಾರ ಸಮರ್ಪಣೆ

12/03/2023, 18:38

ಮಂಗಳೂರು(reporterkarnataka.com): ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.


ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು.
ಸ್ವಾಮೀಜಿಯವರ ಸಮ್ಮುಖದಲ್ಲಿ ಶ್ರೀ ವಿಠೋಭ ದೇವರಿಗೆ ದೇವಳದ ಅರ್ಚಕ ವೃಂದದಿಂದ ವಿಶೇಷ ಅಲಂಕಾರ ಮಾಡಲಾಯಿತು. ಶ್ರೀಗಳು ಕಾಶೀಮಠ ಸಂಸ್ಥಾನದ ಆರಾಧ್ಯ ದೇವರಾದ ವ್ಯಾಸ ರಘುಪತಿಯ ಚಿತ್ರವಿರುವ ಸ್ವರ್ಣಹಾರವನ್ನು ಶ್ರೀ ವಿಠೋಭ ದೇವರಿಗೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುವೀರ್ ಭಂಡಾರಕಾರ್, ಪ್ರಮುಖರಾದ ಗುರುಪ್ರಸಾದ್ ಕಾಮತ್ ಕಾನೆಗಾಡ್, ರಾಘವೇಂದ್ರ ಭಕ್ತ, ವಿಶ್ವನಾಥ ಭಟ್ ಪಂಡರಾಪುರ ಬ್ಯಾಂಕಿನ ಸಿಇಒ ಉಮೇಶ್ ವಿರ್ದೆ, ಕೊಚ್ಚಿ ನವೀನ್ ಕಾಮತ್ ಹಾಗೂ ಕಾಶೀಮಠದ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು