12:29 AM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ

20/02/2024, 20:02

ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು.
ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎಸ್ ಡಿಎಂಸಿ ಅಧ್ಯಕ್ಷೆ ಬೃಂದಾ, ಗಾಯತ್ರಿ ಅತಿಥಿಯಾಗಿದ್ದರು. ಉದ್ಯಮಿ ಮುನೀರ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಜತೆ ಕಾರ್ಯದರ್ಶಿ ಪ್ರಭಾ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಶಿಕ್ಷಕ ಅಶೋಕ ಪೂಜಾರಿ ಅವರು ಭಾಗವಹಿಸಿದ್ದರು.

ಮುಖ್ಯ ಅತಿಥಿ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪ್ರಭಾ ಅವರು ಸೂರ್ಯನಮಸ್ಕಾರ ಮತ್ತು ಯೋಗದ ಮಹತ್ವ ಮತ್ತು ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು.
ಸುಮಾರು 50 ಮಕ್ಕಳು ಸ್ವಯಂಪ್ರೇರಿತರಾಗಿ ಮಕ್ಕಳು 60 ಸೂರ್ಯ ನಮಸ್ಕಾರ ಮಾಡಿ ಆಯೋಜಕರನ್ನು ಅಚ್ಚರಿಗೊಳಗಾಗಿಸಿದರು.
ರಮಾ ಲಕ್ಷ್ಮಿನಾರಾಯಣ ಶಾಖೆಯ ಶಿಕ್ಷಕ ಪ್ರೇಮನಾಥ ಸುವರ್ಣ, ವಸಂತ ಶೆಟ್ಟಿ ಮಾರಿಗುಡಿ ಶಾಖೆಯ ಶಿಕ್ಷಕಿ ಹರಿಣಿ ಮತ್ತು ಮೂರೂ ಶಾಖೆಗಳ ಬಂಧುಗಳು ಭಾಗವಹಿಸಿದ್ದರು.
ಶಿಕ್ಷಕಿ ವೀಣಾ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಸಾವಿತ್ರಿ ವಂದನಾರ್ಪಣೆಗೈದರು. ಶಿಕ್ಷಕಿ ತೇಜಶ್ರೀ ನಿರೂಪಣೆ ಮಾಡಿದರು. ಮುಖ್ಯೋಪಾಧ್ಯಾಯಿನಿ ಶಾಲಿನಿ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು