3:19 PM Saturday1 - February 2025
ಬ್ರೇಕಿಂಗ್ ನ್ಯೂಸ್
ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ;… ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ… ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ… ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ… ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ… ಬಿಜೆಪಿ 12ನೇ ಶತಮಾನದಲ್ಲಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿತ್ತು: ಸಚಿವ…

ಇತ್ತೀಚಿನ ಸುದ್ದಿ

ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ

20/02/2024, 20:02

ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು.
ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎಸ್ ಡಿಎಂಸಿ ಅಧ್ಯಕ್ಷೆ ಬೃಂದಾ, ಗಾಯತ್ರಿ ಅತಿಥಿಯಾಗಿದ್ದರು. ಉದ್ಯಮಿ ಮುನೀರ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಜತೆ ಕಾರ್ಯದರ್ಶಿ ಪ್ರಭಾ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಶಿಕ್ಷಕ ಅಶೋಕ ಪೂಜಾರಿ ಅವರು ಭಾಗವಹಿಸಿದ್ದರು.

ಮುಖ್ಯ ಅತಿಥಿ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪ್ರಭಾ ಅವರು ಸೂರ್ಯನಮಸ್ಕಾರ ಮತ್ತು ಯೋಗದ ಮಹತ್ವ ಮತ್ತು ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು.
ಸುಮಾರು 50 ಮಕ್ಕಳು ಸ್ವಯಂಪ್ರೇರಿತರಾಗಿ ಮಕ್ಕಳು 60 ಸೂರ್ಯ ನಮಸ್ಕಾರ ಮಾಡಿ ಆಯೋಜಕರನ್ನು ಅಚ್ಚರಿಗೊಳಗಾಗಿಸಿದರು.
ರಮಾ ಲಕ್ಷ್ಮಿನಾರಾಯಣ ಶಾಖೆಯ ಶಿಕ್ಷಕ ಪ್ರೇಮನಾಥ ಸುವರ್ಣ, ವಸಂತ ಶೆಟ್ಟಿ ಮಾರಿಗುಡಿ ಶಾಖೆಯ ಶಿಕ್ಷಕಿ ಹರಿಣಿ ಮತ್ತು ಮೂರೂ ಶಾಖೆಗಳ ಬಂಧುಗಳು ಭಾಗವಹಿಸಿದ್ದರು.
ಶಿಕ್ಷಕಿ ವೀಣಾ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಸಾವಿತ್ರಿ ವಂದನಾರ್ಪಣೆಗೈದರು. ಶಿಕ್ಷಕಿ ತೇಜಶ್ರೀ ನಿರೂಪಣೆ ಮಾಡಿದರು. ಮುಖ್ಯೋಪಾಧ್ಯಾಯಿನಿ ಶಾಲಿನಿ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು