1:53 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ

20/02/2024, 20:02

ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು.
ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎಸ್ ಡಿಎಂಸಿ ಅಧ್ಯಕ್ಷೆ ಬೃಂದಾ, ಗಾಯತ್ರಿ ಅತಿಥಿಯಾಗಿದ್ದರು. ಉದ್ಯಮಿ ಮುನೀರ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಜತೆ ಕಾರ್ಯದರ್ಶಿ ಪ್ರಭಾ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಶಿಕ್ಷಕ ಅಶೋಕ ಪೂಜಾರಿ ಅವರು ಭಾಗವಹಿಸಿದ್ದರು.

ಮುಖ್ಯ ಅತಿಥಿ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪ್ರಭಾ ಅವರು ಸೂರ್ಯನಮಸ್ಕಾರ ಮತ್ತು ಯೋಗದ ಮಹತ್ವ ಮತ್ತು ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು.
ಸುಮಾರು 50 ಮಕ್ಕಳು ಸ್ವಯಂಪ್ರೇರಿತರಾಗಿ ಮಕ್ಕಳು 60 ಸೂರ್ಯ ನಮಸ್ಕಾರ ಮಾಡಿ ಆಯೋಜಕರನ್ನು ಅಚ್ಚರಿಗೊಳಗಾಗಿಸಿದರು.
ರಮಾ ಲಕ್ಷ್ಮಿನಾರಾಯಣ ಶಾಖೆಯ ಶಿಕ್ಷಕ ಪ್ರೇಮನಾಥ ಸುವರ್ಣ, ವಸಂತ ಶೆಟ್ಟಿ ಮಾರಿಗುಡಿ ಶಾಖೆಯ ಶಿಕ್ಷಕಿ ಹರಿಣಿ ಮತ್ತು ಮೂರೂ ಶಾಖೆಗಳ ಬಂಧುಗಳು ಭಾಗವಹಿಸಿದ್ದರು.
ಶಿಕ್ಷಕಿ ವೀಣಾ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಸಾವಿತ್ರಿ ವಂದನಾರ್ಪಣೆಗೈದರು. ಶಿಕ್ಷಕಿ ತೇಜಶ್ರೀ ನಿರೂಪಣೆ ಮಾಡಿದರು. ಮುಖ್ಯೋಪಾಧ್ಯಾಯಿನಿ ಶಾಲಿನಿ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು