12:15 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

Panemangalore | ಶ್ರೀ ಕ್ಷೇತ್ರ ಪಾಣೇರು ಬಸದಿ: ಏಕಶಿಲಾ ಮಾನಸ್ತಂಭದ ಸ್ಥಾಪನಾ ಸಮಾರಂಭ

26/02/2026, 11:14

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಪಾಣೇರು ಭ.1008 ಶ್ರೀ ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದಲ್ಲಿ ಭವ್ಯ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮ ಇತ್ತೀಚಿಗೆ ವಿದ್ಯುಕ್ತವಾಗಿ ನಡೆಯಿತು.
ಪರಮ ಪೂಜ್ಯ ಮುನಿ ಶ್ರೀ 108 ಚಂದ್ರಸಾಗರ ಮಹಾರಾಜರ ಪುಣ್ಯ ಸ್ಮರಣೆ ಯೊಂದಿಗೆ, ಪರಮ ಪೂಜ್ಯ ಮುನಿ ಶ್ರೀ 108 ಪರಮ ಸಾಗರ ಮಹಾರಾಜರು, ಪರಮ ಪೂಜ್ಯ ಮುನಿ ಶ್ರೀ 108 ಶ್ರೀ ವೀರ ಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ, ಸೀಮೆಯ ಗುರುಗಳಾದ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಆಶೀರ್ವಾದದೊಂದಿಗೆ, ಬೆಂಗಳೂರಿನ ಶಶಿಕಲಾ ಮತ್ತು ಸಂಪತ್ ಕುಮಾರ್ ಮತ್ತು ಮಕ್ಕಳು ಸಹಕಾರದಿಂದ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮವು ಪಾಣೆಮಂಗಳೂರು ಬಸದಿಯ ಸಮಸ್ತ ಶ್ರಾವಕ ಬಂಧುಗಳ ಉಪಸ್ಥಿತಿಯಲ್ಲಿ ಬೃಹತ್ ಕ್ರೇನ್ ಸಹಾಯದಿಂದ ಧಾರ್ಮಿಕ ವಿಧಿ ವಿಧಾನ ಪೂರ್ವಕವಾಗಿ ಸ್ಥಾಪಿಸಲಾಯಿತು.


ಶ್ರೀ ಕ್ಷೇತ್ರ ಪಾಣೇರು ಬಸದಿಯ ಸಮಿತಿಯ ಅಧ್ಯಕ್ಷ ಸಂಪತ್ ಕುಮಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೋಹನ್ ರಾಜ್ ಚೌಟ, ಕಾರ್ಯದರ್ಶಿಗಳಾದ ಭುವನೇಂದ್ರ ಇಂದ್ರ, ಪ್ರಶಾಂತ್ ಜೈನ್, ಕಾರ್ಯನಿರ್ವಾಹಕರಾದ ಧರಣೇಂದ್ರ ಇಂದ್ರರು ಮತ್ತು ಸಮಿತಿಯ ಸರ್ವ ಸದಸ್ಯರು, ಗಣ್ಯ ಬಂಧುಗಳು, ಶ್ರಾವಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು