5:52 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪಾಣೆಮಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಆಚರಣೆ

01/11/2024, 23:48

ಬಂಟ್ವಾಳ(reporterkarnataka.com):ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವಾ ಅವರು ರಾಷ್ಟ್ರಧ್ವಜಕ್ಕೆ ಧ್ವಜಾರೋಹಣವನ್ನು ನೆರವೇರಿಸಿ, ಶಾಲಾ ಸಂಚಾಲಕರು ಮುಖ್ಯ ಅತಿಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳೊಡಗೂಡಿ ರಾಷ್ಟ್ರಗೀತೆಯನ್ನು ಹಾಡಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.


ನಂತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆಯನ್ನು ಹಾಡುವುದರ ಮೂಲಕ ಪ್ರಾರ್ಥನೆಯನ್ನು ಮಾಡಿ, ವಿದ್ಯಾರ್ಥಿಗಳೇ ರಚಿಸಿದ ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚುವುದರ ಮೂಲಕ ಆಡಳಿತ ಮಂಡಳಿಯ ಅಧ್ಯಕ್ಷರು, ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಶಿಕ್ಷಕರು, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳೊಡಗೂಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಾನಂದ ಪೆರಾಜೆ ಅವರು ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡ ಹಿರಿಮೆ ಗರಿಮೆ, ಕನ್ನಡ ಪರಂಪರೆ ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಕಾರಣಿಭೂತರಾದ ಕನ್ನಡದ ಮಹಾನ್ ಕವಿಗಳು ಹಾಗೂ ನಮ್ಮ ದಕ್ಷಿಣ ಕನ್ನಡದ ಮತ್ತು ಬಂಟ್ವಾಳ ತಾಲೂಕಿನ ಮೇರು ಸಾಹಿತಿಗಳನ್ನು ಕುರಿತಂತೆ ಅವರೆಲ್ಲರ ಸಾಧನೆಯನ್ನು ಪರಿಚಯಿಸುವುದರ ಮೂಲಕ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಅತ್ಯಂತ ಅರ್ಥಪೂರ್ಣವಾಗಿ ಮನವರಿಕೆ ಮಾಡಿಕೊಟ್ಟರು. ಮತ್ತೋರ್ವ ಅತಿಥಿ ಪಾಣೆಮಂಗಳೂರಿನ ಆಶಾಕಾರ್ಯಕರ್ತೆ ಜ್ಯೋತಿಲಕ್ಷ್ಮಿ ಅವರು ಉಪಸ್ಥಿತರಿದ್ದರು. ನಂತರ ಮುಖ್ಯ ಅತಿಥಿಗಳಿಗೆ ಗೌರವಪೂರ್ವಕವಾಗಿ ಶಾಲಾ ಸಂಚಾಲಕರು ಮತ್ತು ಅಧ್ಯಕ್ಷರು ಸನ್ಮಾನಿಸಿ, ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಡಾ. ಪಿ ವಿಶ್ವನಾಥ ನಾಯಕ್ ಮತ್ತು ಮುಖ್ಯೋಪಾಧ್ಯಾಯರಾದ ಶಿವಪ್ಪ ನಾಯ್ಕ ಕನ್ನಡ ರಾಜ್ಯೋತ್ಸವದ ಸಂದೇಶಗಳನ್ನು ತಿಳಿಸಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ನವ್ಯ ಮತ್ತು ಒಳಗದವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು. ವೇದಿಕೆಯಲ್ಲಿ ನಮ್ಮ ಶಾಲೆಯ ಹಿರಿಯ ಶಿಕ್ಷಕಿ ಹಾಗೂ ಕವಯಿತ್ರಿ ಸುಧಾ ಮತ್ತು ಶಾಲಾ ನಾಯಕ ಮನ್ವಿತ್ ಸಿ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಪ್ಪ ನಾಯಕ್ ಸ್ವಾಗತಿಸಿ, ಕನ್ನಡ ಭಾಷಾ ಆಧ್ಯಾಪಕರಾದ ಶ್ರೀ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಹತ್ತನೇ ತರಗತಿಯ ವಿದ್ಯಾರ್ಥಿನಿ ಶೈಮಾ ಅತಿಥಿಗಳ ಪ್ರಶಸ್ತಿ ಪತ್ರ ವಾಚಿಸಿ, ಖತೀಜತುಲ್ ಸಹಬೀರ ಧನ್ಯವಾದ ಸಮರ್ಪಣೆ ನೀಡಿ, ಅಬ್ದುಲ್ ರಾಝಿಕ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು