5:28 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಲೇಪನ; ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ

09/03/2024, 14:43

ಬಂಟ್ವಾಳ(reporterkarnataka.com): ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶುಕ್ರವಾರ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ
ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.


ಬ್ರಹ್ಮಕಲಶೋತ್ಸವ ನಡೆಯುವ ಹೊತ್ತಿನಲ್ಲೇ ದೇವಸ್ಥಾನದ ಪ್ರಾಂಗಣದಲ್ಲಿ ನೃತ್ಯಭಜನೆ ಯೋಗೀಶ್ ಸಪಲ್ಯ ಬೋಳಂತೂರು ಮತ್ತು ದಾಮೋದರ ನೆತ್ತರಕೆರೆ ಮಾರ್ಗದರ್ಶನದಲ್ಲಿ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಡಾ. ಕಮಲಾ ಪ್ರಭಾಕರ ಭಟ್ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೇವರನ್ನು ಒಲಿಸುವ ಮುಖ್ಯ ಕಾರ್ಯವನ್ನು ಭಜನೆಯಿಂದ ಮಾಡಲು ಸಾಧ್ಯ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಈ ಸಂದರ್ಭ ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕ ಪ್ರಕಾಶ್ ಕಾರಂತ ನರಿಕೊಂಬು, ಉದ್ಯಮಿಗಳಾದ ಗಣೇಶ್ ರಾವ್, ಸಾಯಿಚಂದ್ ಜೈನ್, ಪುರೋಹಿತರಾದ ವೇ.ಮೂ.ವೆಂಕಪ್ಪಯ್ಯ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ನೃತ್ಯಭಜನೆ ಸಂಯೋಜಕರಾದ ಯೋಗೀಶ್ ಸಪಲ್ಯ ಬೋಳಂತೂರು ಉಪಸ್ಥಿತರಿದ್ದರು. .
ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರ್ವಹಿಸಿದರು. ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಉಪಾಧ್ಯಕ್ಷ ಬಿ.ರಘು ಸಪಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ, ಸಂಚಾಲಕ ಪ್ರಕಾಶ್ ಕಾರಂತ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ವ್ಯವಸ್ಥಾಪನಾ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವಿವಿಧ ಸಮಿತಿಗಳ ಪ್ರಮುಖರು, ಸಂಚಾಲಕರು, ಸಹಸಂಚಾಲಕರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು