12:49 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ನಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

29/12/2024, 21:47

ಮಂಗಳೂರು(reporterkarnataka.com): ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ಇದರ ಸುಕೂನ್ ಯೋಜನೆಯಡಿಯಲ್ಲಿ ನಿರ್ಮಿಸಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.


ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಸಾಬಿತ್‌ ಸಖಾಫಿ ತಂಙಳ್ ನೂತನ ಮನೆಯನ್ನು ಹಸ್ತಾಂತರಿಸಿದರು.
ಮಂಗಳೂರು ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹಲವು ಸಂಘ ಸಂಸ್ಥೆಗಳು ಬಡವರಿಗೆ ಒಂದು ಕೊಠಡಿಯ ಮನೆ ನಿರ್ಮಿಸಿಕೊಡುವಂತದ್ದು ನಾವು ನೋಡಿದ್ದೇವೆ. ಅದರೆ ಇಹ್ಸಾನ್ ಟ್ರಸ್ಟ್ ಎರಡು ವಿಶಾಲವಾದ ಕೊಠಡಿಯ ಸುಸಜ್ಜಿತವಾದ ಉತ್ತಮ ಗುಣಮಟ್ಟದ ಮನೆ ನಿರ್ಮಿಸಿ ಕೊಡುವ ಮೂಲಕ ಇದರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ಈ ಮನೆಯವರು ಪ್ರತಿ ದಿನ ಇಹ್ಸಾನ್ ತಂಡದ ಸದಸ್ಯರಿಗೆ ಪ್ರಾರ್ಥಿಸುತ್ತಾರೆ. ಅದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಕಾವೂರು ಪೊಲೀಸ್ ಠಾಣಾ ಪೋಲಿಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು‌ ಮುಖ್ಯ ಅತಿಥಿಯಾಗಿ ಭಾಗವಹಿಸಿ‌ ಮಾತನಾಡಿ ಬಡವರಿಗೆ ಮದುವೆ ಮಾಡುವುದು ಮನೆ ನಿರ್ಮಿಸುದು ಶೈಕ್ಷಣಿಕ ಹಿಂದುಳಿದವರಿಗೆ ಸಹಾಯ ಮಾಡುವುದು ಅತ್ಯಂತ ಪುಣ್ಯದ ಕೆಲಸವಾಗಿದೆ. ಈ ಮೂರು‌ ಕಾರ್ಯದಲ್ಲಿ ಇಹ್ಸಾನ್ ಟ್ರಸ್ಟ್ ಸಕ್ರಿಯವಾಗಿದೆ. ಅಪರಾಧ ತಡೆ ಮಾಸಾಚರಣೆಯನ್ನು ಕಾವೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಯೋಸಿದ್ದು ಕಳೆದ ಒಂದು ವರ್ಷಗಳಿಂದ ಸುಮಾರು 113 ಕೇಸ್ ಗಳನ್ನು ದಾಖಲಿಸಿದ್ದೇವೆ. ಈ ಭಾಗದ ಜನರು ಮಾದಕ ದ್ರವ್ಯ ವ್ಯಸನಕ್ಕೆ ತುತ್ತಾಗದಂತೆ ಜಾಗೃತರಾಗಬೇಕು ಎಂದು ಹೇಳಿದರು.
ಇಹ್ಸಾನ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ನಿಸಾರ್ ಕೆ.ಎಂ‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ತೈಬಾ ಆಕಾಡೆಮಿ ಮ್ಯಾನೇಜರ್ ಬಶೀರ್‌ ಮದನಿ ಅಲ್-ಕಾಮಿಲ್ , ಕೂಳೂರು ಮುಹೀಯುದ್ದೀನ್ ಜುಮಾ‌ ಮಸೀದಿ ಅಧ್ಯಕ್ಷ ಕೆ.ಅಬ್ಬಾಸ್ ಹಾಜಿ, ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಅಲಿ, ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಸಿಪಿಎಂ ಮುಖಂಡ ದಯಾನಂದ ಶೆಟ್ಟಿ, ಕೂಳೂರು ಕಾವೂರು ಮುಸ್ಲಿಂ ಒಕ್ಕೂಟ ಅಧ್ಯಕ್ಷ ಹುಸೈನ್ ರಿಯಾಝ್, ಅಲ್-ಫಾರೂಕ್ ಜುಮಾ ಮಸೀದಿ ಅಧ್ಯಕ್ಷ ನೌಷಾದ್ ಅಲಿ, ಇಹ್ಸಾನ್ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷ ಆಫ್ರಿದ್ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಜುನೈದ್ ಸ್ವಾಗತಿಸಿದರು. ಕಾರ್ಯದರ್ಶಿ ಶಾರೀಕ್ ವಂದಿಸಿದರು. ಸದಸ್ಯ ಶಕೀಲ್ ಕೂಳೂರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು