1:53 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mysore | ಹುಣಸೂರಿನ ಪಪ್ಪಾಯಿ ತ್ಯಾಜ್ಯ ಬಿಟ್ಟಂಗಾಲ ರಸ್ತೆ ಬದಿ ಡಂಪ್: 10 ಸಾವಿರ ರೂ. ದಂಡ, ಕಸ ಮತ್ತೆ ಪಾರ್ಸೆಲ್!

17/10/2025, 12:20

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com

ಹುಣಸೂರಿನ ಪಪ್ಪಾಯಿ ತ್ಯಾಜ್ಯವನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿದ ವಾಹನಕ್ಕೆ 10 ಸಾವಿರ ರೂ. ದಂಡ ಹಾಕಿ, ತ್ಯಾಜ್ಯವನ್ನು ಅದೇ ಲಾಯಿಯಲ್ಲಿ ಮರಳಿಸಿದ ಘಟನೆ ನಡೆದಿದೆ.
ಹುಣಸೂರಿನಿಂದ ಪಪ್ಪಾಯಿಯನ್ನು ಕೇರಳಕ್ಕೆ ತುಂಬಿಸಿಕೊಂಡು ಹೋದ ಅಶೋಕ್ ಲೈಲ್ಯಾಂಡ್ ವಾಹನವೊಂದು ಹಿಂತಿರುಗಿ ಬರುವಾಗ ಅದರ ತ್ಯಾಜ್ಯಗಳನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದಾಗ, ಸಾರ್ವಜನಿಕರು ಈ ವಾಹನವನ್ನು ಗಮನಿಸಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು. ಕ್ರಮಕ್ಕೆ ಮುಂದಾದ ಗ್ರಾಮ ಪಂಚಾಯಿತಿ ಈತನಿಗೆ 10,000 ದಂಡವನ್ನು ವಿಧಿಸಿ, ತ್ಯಾಜ್ಯವನ್ನು ಮತ್ತೆ ವಾಹನಕ್ಕೆ ತುಂಬಿಸಿ ಕಳಿಸಿರುವ ಘಟನೆ ಗುರುವಾ ಸಂಜೆ ನಡೆದಿದೆ.
ಕೊಡಗಿನ ಎಲ್ಲಾ ಭಾಗದಲ್ಲೂ ಇದೇ ರೀತಿ ಸಾರ್ವಜನಿಕರು ಎಚ್ಚೆತ್ತುಕೊಂಡು ತ್ಯಾಜ್ಯವನ್ನು ಕಂಡಲ್ಲಿ ಬಿಸಾಕುವವರನ್ನು ಪತ್ತೆ ಹಚ್ಚಿ ಗ್ರಾಮ ಪಂಚಾಯಿತಿ ಅಥವಾ ಪೊಲೀಸರಿಗೆ ಸುದ್ದಿ ಮುಟ್ಟಿಸಿ ದಂಡ ವಿಧಿಸಿದರೆ ಒಂದಿಷ್ಟು ಹೊರ ಜಿಲ್ಲೆಯ ಹೊರ ರಾಜ್ಯದ ತ್ಯಾಜ್ಯಗಳ ಸಂಖ್ಯೆ ಕೊಡಗಿನಲ್ಲಿ ವಿಲೇವಾರಿಯಾಗುವುದ್ದನ್ನು ತಪ್ಪಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು