2:01 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Mysore | ಹುಣಸೂರಿನ ಪಪ್ಪಾಯಿ ತ್ಯಾಜ್ಯ ಬಿಟ್ಟಂಗಾಲ ರಸ್ತೆ ಬದಿ ಡಂಪ್: 10 ಸಾವಿರ ರೂ. ದಂಡ, ಕಸ ಮತ್ತೆ ಪಾರ್ಸೆಲ್!

17/10/2025, 12:20

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com

ಹುಣಸೂರಿನ ಪಪ್ಪಾಯಿ ತ್ಯಾಜ್ಯವನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿದ ವಾಹನಕ್ಕೆ 10 ಸಾವಿರ ರೂ. ದಂಡ ಹಾಕಿ, ತ್ಯಾಜ್ಯವನ್ನು ಅದೇ ಲಾಯಿಯಲ್ಲಿ ಮರಳಿಸಿದ ಘಟನೆ ನಡೆದಿದೆ.
ಹುಣಸೂರಿನಿಂದ ಪಪ್ಪಾಯಿಯನ್ನು ಕೇರಳಕ್ಕೆ ತುಂಬಿಸಿಕೊಂಡು ಹೋದ ಅಶೋಕ್ ಲೈಲ್ಯಾಂಡ್ ವಾಹನವೊಂದು ಹಿಂತಿರುಗಿ ಬರುವಾಗ ಅದರ ತ್ಯಾಜ್ಯಗಳನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದಾಗ, ಸಾರ್ವಜನಿಕರು ಈ ವಾಹನವನ್ನು ಗಮನಿಸಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು. ಕ್ರಮಕ್ಕೆ ಮುಂದಾದ ಗ್ರಾಮ ಪಂಚಾಯಿತಿ ಈತನಿಗೆ 10,000 ದಂಡವನ್ನು ವಿಧಿಸಿ, ತ್ಯಾಜ್ಯವನ್ನು ಮತ್ತೆ ವಾಹನಕ್ಕೆ ತುಂಬಿಸಿ ಕಳಿಸಿರುವ ಘಟನೆ ಗುರುವಾ ಸಂಜೆ ನಡೆದಿದೆ.
ಕೊಡಗಿನ ಎಲ್ಲಾ ಭಾಗದಲ್ಲೂ ಇದೇ ರೀತಿ ಸಾರ್ವಜನಿಕರು ಎಚ್ಚೆತ್ತುಕೊಂಡು ತ್ಯಾಜ್ಯವನ್ನು ಕಂಡಲ್ಲಿ ಬಿಸಾಕುವವರನ್ನು ಪತ್ತೆ ಹಚ್ಚಿ ಗ್ರಾಮ ಪಂಚಾಯಿತಿ ಅಥವಾ ಪೊಲೀಸರಿಗೆ ಸುದ್ದಿ ಮುಟ್ಟಿಸಿ ದಂಡ ವಿಧಿಸಿದರೆ ಒಂದಿಷ್ಟು ಹೊರ ಜಿಲ್ಲೆಯ ಹೊರ ರಾಜ್ಯದ ತ್ಯಾಜ್ಯಗಳ ಸಂಖ್ಯೆ ಕೊಡಗಿನಲ್ಲಿ ವಿಲೇವಾರಿಯಾಗುವುದ್ದನ್ನು ತಪ್ಪಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು