9:41 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು

20/10/2023, 23:32

ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.


ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ತೆರಳಿದ್ದು ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ಯುವ ಮೋರ್ಚಾದ ಮುಖಂಡರಾದ ವಿಖ್ಯಾತ್, ಸುಹಾಸ್ ಮುಟ್ಟಪಾಡಿ, ರಾಕೇಶ್ ಕುಕ್ಕುಂದೂರು, ರಂಜಿತ್ ಕೌಡೂರು, ಮುಸ್ತಾ ಜಾರ್ಕಳ ಮೊದಲಾದವರು ಅಕ್ರಮ ಕೂಟ ಸೇರಿ ಅಲ್ಟಾಝ್ ಅವರನ್ನು ಎಳೆದುಕೊಂಡು ಹೋದರೆನ್ನಲಾಗಿದೆ.
ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಮೂರ್ತಿಯ ಬಳಿ ಕರೆದುಕೊಂಡು ಹೋಗಿ ಅದು ಕಂಚಿನ ಮೂರ್ತಿ ಎಂಬುದಾಗಿ ಸುತ್ತಿಗೆ ನೀಡಿ ಪರೀಕ್ಷಿಸು ಎಂದು ಹೇಳಿದ್ದಲ್ಲದೇ, ಅಲ್ಟಜ್ ಅವರಲ್ಲಿ ‘ಅದು ಕಂಚಿನ ಮೂರ್ತಿ’ ಎಂದು ಹೇಳಿಸಿ ವಿಡಿಯೋ ಮಾಡಿ ತೊಂದರೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಲ್ಟಾಝ್ ರವರ ಮೊಬೈಲನ್ನು ಎಳೆದುಕೊಂಡು ತೊಂದರೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು