12:36 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು

20/10/2023, 23:32

ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.


ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ತೆರಳಿದ್ದು ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ಯುವ ಮೋರ್ಚಾದ ಮುಖಂಡರಾದ ವಿಖ್ಯಾತ್, ಸುಹಾಸ್ ಮುಟ್ಟಪಾಡಿ, ರಾಕೇಶ್ ಕುಕ್ಕುಂದೂರು, ರಂಜಿತ್ ಕೌಡೂರು, ಮುಸ್ತಾ ಜಾರ್ಕಳ ಮೊದಲಾದವರು ಅಕ್ರಮ ಕೂಟ ಸೇರಿ ಅಲ್ಟಾಝ್ ಅವರನ್ನು ಎಳೆದುಕೊಂಡು ಹೋದರೆನ್ನಲಾಗಿದೆ.
ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಮೂರ್ತಿಯ ಬಳಿ ಕರೆದುಕೊಂಡು ಹೋಗಿ ಅದು ಕಂಚಿನ ಮೂರ್ತಿ ಎಂಬುದಾಗಿ ಸುತ್ತಿಗೆ ನೀಡಿ ಪರೀಕ್ಷಿಸು ಎಂದು ಹೇಳಿದ್ದಲ್ಲದೇ, ಅಲ್ಟಜ್ ಅವರಲ್ಲಿ ‘ಅದು ಕಂಚಿನ ಮೂರ್ತಿ’ ಎಂದು ಹೇಳಿಸಿ ವಿಡಿಯೋ ಮಾಡಿ ತೊಂದರೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಲ್ಟಾಝ್ ರವರ ಮೊಬೈಲನ್ನು ಎಳೆದುಕೊಂಡು ತೊಂದರೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು