9:40 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು

20/10/2023, 23:32

ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.


ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ತೆರಳಿದ್ದು ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ಯುವ ಮೋರ್ಚಾದ ಮುಖಂಡರಾದ ವಿಖ್ಯಾತ್, ಸುಹಾಸ್ ಮುಟ್ಟಪಾಡಿ, ರಾಕೇಶ್ ಕುಕ್ಕುಂದೂರು, ರಂಜಿತ್ ಕೌಡೂರು, ಮುಸ್ತಾ ಜಾರ್ಕಳ ಮೊದಲಾದವರು ಅಕ್ರಮ ಕೂಟ ಸೇರಿ ಅಲ್ಟಾಝ್ ಅವರನ್ನು ಎಳೆದುಕೊಂಡು ಹೋದರೆನ್ನಲಾಗಿದೆ.
ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಮೂರ್ತಿಯ ಬಳಿ ಕರೆದುಕೊಂಡು ಹೋಗಿ ಅದು ಕಂಚಿನ ಮೂರ್ತಿ ಎಂಬುದಾಗಿ ಸುತ್ತಿಗೆ ನೀಡಿ ಪರೀಕ್ಷಿಸು ಎಂದು ಹೇಳಿದ್ದಲ್ಲದೇ, ಅಲ್ಟಜ್ ಅವರಲ್ಲಿ ‘ಅದು ಕಂಚಿನ ಮೂರ್ತಿ’ ಎಂದು ಹೇಳಿಸಿ ವಿಡಿಯೋ ಮಾಡಿ ತೊಂದರೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಲ್ಟಾಝ್ ರವರ ಮೊಬೈಲನ್ನು ಎಳೆದುಕೊಂಡು ತೊಂದರೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು