5:15 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ

24/09/2023, 11:24

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗಲಿದೆ.
ಚೈತ್ರಾ ಕುಂದಾಪುರ ಅವರ ಸಿಸಿಬಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯವಾಗಿತ್ತು. ನಿನ್ನೆ ಸಿಸಿಬಿ ಪೊಲೀಸರು ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಅವಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು.
ನಿನ್ನೆ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ್ದ ಚೈತ್ರಾ ಕುಂದಾಪುರ ಅವಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿದ್ದಳು.
ಶನಿವಾರ ಸಂಜೆ ಸುಮಾರು 6 ಗಂಟೆಗೆ ಚೈತ್ರಾ ಮತ್ತು ಆಕೆಯ ಟೀಮನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು. ಇಲ್ಲಿನ ಹೊಸ ಜೈಲಿನ ಪ್ರತ್ಯೇಕ ಕೊಠಡಿಯಲ್ಲಿ ಚೈತ್ರಾಳನ್ನು ಒಂಟಿಯಾಗಿ ಇರಿಸಲಾಗಿದೆ.
ಚೈತ್ರಾ ಶನಿವಾರ ರಾತ್ರಿ ಜೈಲು ಸಿಬ್ಬಂದಿ ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ್ದಾಳೆ.ಇಂದು ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವನೆ ಮಾಡಿದ್ದಾಳೆ. ಹಾಗೆ ಇಂದು ಆಕೆಗೆ ಜೈಲ್ ಸಿಬ್ಬಂದಿಗಳು ಯುಟಿಪಿ(ಅಂಡರ್ ಟ್ರೈಯಲ್ ಪ್ರಿಸಿನರ್) ಸಂಖ್ಯೆ ನೀಡಿದ್ದಾರೆ.
ಒಟ್ಟು 10 ದಿನಗಳ ಕಾಲ ಹೊಸ ಬಂಧಿಖಾನೆಯಲ್ಲೇ ಚೈತ್ರಾ ಉಳಿಯಲಿದ್ದಾಳೆ. ಬಳಿಕ ಹಳೆಯ ಜೈಲಿಗೆ ಚೈತ್ರಾಳನ್ನು ಜೈಲು ಸಿಬ್ಬಂದಿ ಶಿಫ್ಟ್ ಮಾಡಲಿದ್ದಾರೆ.
ಪ್ರಕರಣದ ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಪ್ರತ್ಯೇಕ‌ ಪುರುಷರ ಸೆಲ್​ನಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು