2:37 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ

24/09/2023, 11:24

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗಲಿದೆ.
ಚೈತ್ರಾ ಕುಂದಾಪುರ ಅವರ ಸಿಸಿಬಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯವಾಗಿತ್ತು. ನಿನ್ನೆ ಸಿಸಿಬಿ ಪೊಲೀಸರು ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಅವಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು.
ನಿನ್ನೆ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ್ದ ಚೈತ್ರಾ ಕುಂದಾಪುರ ಅವಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿದ್ದಳು.
ಶನಿವಾರ ಸಂಜೆ ಸುಮಾರು 6 ಗಂಟೆಗೆ ಚೈತ್ರಾ ಮತ್ತು ಆಕೆಯ ಟೀಮನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು. ಇಲ್ಲಿನ ಹೊಸ ಜೈಲಿನ ಪ್ರತ್ಯೇಕ ಕೊಠಡಿಯಲ್ಲಿ ಚೈತ್ರಾಳನ್ನು ಒಂಟಿಯಾಗಿ ಇರಿಸಲಾಗಿದೆ.
ಚೈತ್ರಾ ಶನಿವಾರ ರಾತ್ರಿ ಜೈಲು ಸಿಬ್ಬಂದಿ ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ್ದಾಳೆ.ಇಂದು ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವನೆ ಮಾಡಿದ್ದಾಳೆ. ಹಾಗೆ ಇಂದು ಆಕೆಗೆ ಜೈಲ್ ಸಿಬ್ಬಂದಿಗಳು ಯುಟಿಪಿ(ಅಂಡರ್ ಟ್ರೈಯಲ್ ಪ್ರಿಸಿನರ್) ಸಂಖ್ಯೆ ನೀಡಿದ್ದಾರೆ.
ಒಟ್ಟು 10 ದಿನಗಳ ಕಾಲ ಹೊಸ ಬಂಧಿಖಾನೆಯಲ್ಲೇ ಚೈತ್ರಾ ಉಳಿಯಲಿದ್ದಾಳೆ. ಬಳಿಕ ಹಳೆಯ ಜೈಲಿಗೆ ಚೈತ್ರಾಳನ್ನು ಜೈಲು ಸಿಬ್ಬಂದಿ ಶಿಫ್ಟ್ ಮಾಡಲಿದ್ದಾರೆ.
ಪ್ರಕರಣದ ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಪ್ರತ್ಯೇಕ‌ ಪುರುಷರ ಸೆಲ್​ನಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು