8:26 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ

24/09/2023, 11:24

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗಲಿದೆ.
ಚೈತ್ರಾ ಕುಂದಾಪುರ ಅವರ ಸಿಸಿಬಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯವಾಗಿತ್ತು. ನಿನ್ನೆ ಸಿಸಿಬಿ ಪೊಲೀಸರು ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಅವಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು.
ನಿನ್ನೆ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ್ದ ಚೈತ್ರಾ ಕುಂದಾಪುರ ಅವಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿದ್ದಳು.
ಶನಿವಾರ ಸಂಜೆ ಸುಮಾರು 6 ಗಂಟೆಗೆ ಚೈತ್ರಾ ಮತ್ತು ಆಕೆಯ ಟೀಮನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದು ತರಲಾಯಿತು. ಇಲ್ಲಿನ ಹೊಸ ಜೈಲಿನ ಪ್ರತ್ಯೇಕ ಕೊಠಡಿಯಲ್ಲಿ ಚೈತ್ರಾಳನ್ನು ಒಂಟಿಯಾಗಿ ಇರಿಸಲಾಗಿದೆ.
ಚೈತ್ರಾ ಶನಿವಾರ ರಾತ್ರಿ ಜೈಲು ಸಿಬ್ಬಂದಿ ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ್ದಾಳೆ.ಇಂದು ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವನೆ ಮಾಡಿದ್ದಾಳೆ. ಹಾಗೆ ಇಂದು ಆಕೆಗೆ ಜೈಲ್ ಸಿಬ್ಬಂದಿಗಳು ಯುಟಿಪಿ(ಅಂಡರ್ ಟ್ರೈಯಲ್ ಪ್ರಿಸಿನರ್) ಸಂಖ್ಯೆ ನೀಡಿದ್ದಾರೆ.
ಒಟ್ಟು 10 ದಿನಗಳ ಕಾಲ ಹೊಸ ಬಂಧಿಖಾನೆಯಲ್ಲೇ ಚೈತ್ರಾ ಉಳಿಯಲಿದ್ದಾಳೆ. ಬಳಿಕ ಹಳೆಯ ಜೈಲಿಗೆ ಚೈತ್ರಾಳನ್ನು ಜೈಲು ಸಿಬ್ಬಂದಿ ಶಿಫ್ಟ್ ಮಾಡಲಿದ್ದಾರೆ.
ಪ್ರಕರಣದ ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಪ್ರತ್ಯೇಕ‌ ಪುರುಷರ ಸೆಲ್​ನಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು