7:39 PM Wednesday23 - July 2025
ಬ್ರೇಕಿಂಗ್ ನ್ಯೂಸ್
ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ…

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿ ಹಗರಣ: ನಿರೀಕ್ಷಣಾ ಜಾಮೀನು ತಿರಸ್ಕಾರ; ಕಲ್ಲಿಕೋಟೆಯಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ

11/11/2024, 16:45

ಕಾರ್ಕಳ(reporterkarnataka.com): ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದ್ದ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೈಲೂರಿನ ಥೀಮ್ ಪಾರ್ಕ್ ನಲ್ಲಿ  ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್‌ನ ಉತ್ತರ ಕನ್ನಡ ದ  ಕೃಷ್ಣ ನಾಯ್ಕ ಅವರನ್ನು ಕಾರ್ಕಳ ನಗರ ಪೊಲೀಸರು ಕ್ಯಾಲಿಕಟ್‌ನಲ್ಲಿ ಬಂಧಿಸಿದ್ದಾರೆ.
ಕೃಷ್ಣ ಶೆಟ್ಟಿ ಬಜಗೋಳಿಯವರು ಪರಶುರಾಮ ಮೂರ್ತಿ ಲೋಪವಾಗಿದೆ ಎಂಬ ನಗರ ಠಾಣೆಯಲ್ಲಿ ದಾಖಲಿಸಿರುವ ದೂರಿಗೆ ಸಂಬಂಧಪಟ್ಟಂತೆ ನ.4ರಂದು ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಶಿಲ್ಪಿ ಕೃಷ್ಣ ನಾಯ್ಕ ಅವರ ನಿರೀಕ್ಷಣಾ ಜಾಮೀನು ಆದೇಶವನ್ನು ನ.7ಕ್ಕೆ ಕಾಯ್ದಿರಿಸಿದ್ದರು. ನ.7ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು‌. ಬಳಿಕ   ಪೊಲೀಸರು ಕೃಷ್ಣ ನಾಯ್ಕನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು