10:18 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿ ಹಗರಣ: ನಿರೀಕ್ಷಣಾ ಜಾಮೀನು ತಿರಸ್ಕಾರ; ಕಲ್ಲಿಕೋಟೆಯಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ

11/11/2024, 16:45

ಕಾರ್ಕಳ(reporterkarnataka.com): ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದ್ದ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೈಲೂರಿನ ಥೀಮ್ ಪಾರ್ಕ್ ನಲ್ಲಿ  ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್‌ನ ಉತ್ತರ ಕನ್ನಡ ದ  ಕೃಷ್ಣ ನಾಯ್ಕ ಅವರನ್ನು ಕಾರ್ಕಳ ನಗರ ಪೊಲೀಸರು ಕ್ಯಾಲಿಕಟ್‌ನಲ್ಲಿ ಬಂಧಿಸಿದ್ದಾರೆ.
ಕೃಷ್ಣ ಶೆಟ್ಟಿ ಬಜಗೋಳಿಯವರು ಪರಶುರಾಮ ಮೂರ್ತಿ ಲೋಪವಾಗಿದೆ ಎಂಬ ನಗರ ಠಾಣೆಯಲ್ಲಿ ದಾಖಲಿಸಿರುವ ದೂರಿಗೆ ಸಂಬಂಧಪಟ್ಟಂತೆ ನ.4ರಂದು ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಶಿಲ್ಪಿ ಕೃಷ್ಣ ನಾಯ್ಕ ಅವರ ನಿರೀಕ್ಷಣಾ ಜಾಮೀನು ಆದೇಶವನ್ನು ನ.7ಕ್ಕೆ ಕಾಯ್ದಿರಿಸಿದ್ದರು. ನ.7ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು‌. ಬಳಿಕ   ಪೊಲೀಸರು ಕೃಷ್ಣ ನಾಯ್ಕನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು