9:35 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ

17/10/2023, 10:08

ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ.
ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಹಿಂದುತ್ವ ಉಳಿಸಿ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.
ಕಾರ್ಕಳ ಬೈಲೂರುನಲ್ಲಿ ನಿರ್ಮಾಣಗೊಂಡು ಶಾಸಕ ಸುನಿಲ್ ಕುಮಾರ್ ಅವರಿಂದ ಅಪಚಾರಕ್ಕೊಳಗಾದ ಕರಾವಳಿ ಸೃಷ್ಟಿಕರ್ತ ಪರಶುರಾಮರ ಹೊಸ ಮೂರ್ತಿಯನ್ನು ಸರಕಾರ ಶಾಸ್ತ್ರ ಪೂರ್ವಕವಾಗಿ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಧರ್ಮ ಉಳಿಸಲಿ ಎಂದು ಹೆಗ್ಡೆ ತಿಳಿಸಿದ್ದಾರೆ.
ಪರಶು ರಾಮರು ವಿಷ್ಣುವಿನ ಅವತಾರವೆತ್ತವರು. ಕಾರ್ಕಳದಲ್ಲಿ ಅಂತಹ ಪುಣ್ಯ ಪುರುಷರ ಮೂರ್ತಿ ಕಾರ್ಕಳದಲ್ಲಿ ನಿರ್ಮಾಣ ಕಂಡಾಗ ಹಿಂದೂ ಧರ್ಮದ ಎಲ್ಲರೂ ಸಂತಸ ಪಟ್ಟಿದ್ದರು.
ಎಲ್ಲಾ ಹಿಂದೂ ಸಂಘಟನೆಗಳು ಕೂಡ ಈ ವಿಚಾರ ಬಂದಾಗ ಸಂತಸ ಪಟ್ಟಿದ್ದರು. ಹೆಮ್ಮೆ ಪಟ್ಟಿದ್ದರು. ಆದರೆ ಈ ಮೂರ್ತಿಯನ್ನು ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡಿಕೊಂಡು ಬಂದವರು ನಕಲಿ ಮಾಡುತ್ತಾರೆ ಎಂದು ಕನಸಲ್ಲಿ ಕೂಡ ಎಣಿಸಿರಲಿಲ್ಲ ಎಂದು ಅವರು
ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿದೆ. ಇಂತಹ ಸಂತಸದ ದಿನಗಳಲ್ಲಿ ಕರಾವಳಿಯ ಸೃಷ್ಟಿ ಕರ್ತನ ಮೂರ್ತಿಯನ್ನೇ ನಕಲಿ ಮಾಡಿರುವುದು ಹಿಂದುತ್ವಕ್ಕೆ ಮಾಡಿದ ದ್ರೋಹ. ಹಿಂದುತ್ವಕ್ಕೆ ಯಾರೇ ದ್ರೋಹ ಮಾಡಿದರು ಕ್ಷಮೆ ಇಲ್ಲ. ಅದು ಭಯೋತ್ಪಾದನೆಗೆ ಸಮಾನ.
ಈ ದ್ರೋಹದಲ್ಲಿ ಸುನಿಲ್ ಕುಮಾರ್ ಅವರ ನೇರ ಪಾತ್ರ ಇರುವುದರಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವಂತೆ ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಶ್ಚಂದ್ರ ಹೆಗ್ಡೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು