4:04 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ

17/10/2023, 10:08

ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ.
ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಹಿಂದುತ್ವ ಉಳಿಸಿ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.
ಕಾರ್ಕಳ ಬೈಲೂರುನಲ್ಲಿ ನಿರ್ಮಾಣಗೊಂಡು ಶಾಸಕ ಸುನಿಲ್ ಕುಮಾರ್ ಅವರಿಂದ ಅಪಚಾರಕ್ಕೊಳಗಾದ ಕರಾವಳಿ ಸೃಷ್ಟಿಕರ್ತ ಪರಶುರಾಮರ ಹೊಸ ಮೂರ್ತಿಯನ್ನು ಸರಕಾರ ಶಾಸ್ತ್ರ ಪೂರ್ವಕವಾಗಿ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಧರ್ಮ ಉಳಿಸಲಿ ಎಂದು ಹೆಗ್ಡೆ ತಿಳಿಸಿದ್ದಾರೆ.
ಪರಶು ರಾಮರು ವಿಷ್ಣುವಿನ ಅವತಾರವೆತ್ತವರು. ಕಾರ್ಕಳದಲ್ಲಿ ಅಂತಹ ಪುಣ್ಯ ಪುರುಷರ ಮೂರ್ತಿ ಕಾರ್ಕಳದಲ್ಲಿ ನಿರ್ಮಾಣ ಕಂಡಾಗ ಹಿಂದೂ ಧರ್ಮದ ಎಲ್ಲರೂ ಸಂತಸ ಪಟ್ಟಿದ್ದರು.
ಎಲ್ಲಾ ಹಿಂದೂ ಸಂಘಟನೆಗಳು ಕೂಡ ಈ ವಿಚಾರ ಬಂದಾಗ ಸಂತಸ ಪಟ್ಟಿದ್ದರು. ಹೆಮ್ಮೆ ಪಟ್ಟಿದ್ದರು. ಆದರೆ ಈ ಮೂರ್ತಿಯನ್ನು ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡಿಕೊಂಡು ಬಂದವರು ನಕಲಿ ಮಾಡುತ್ತಾರೆ ಎಂದು ಕನಸಲ್ಲಿ ಕೂಡ ಎಣಿಸಿರಲಿಲ್ಲ ಎಂದು ಅವರು
ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿದೆ. ಇಂತಹ ಸಂತಸದ ದಿನಗಳಲ್ಲಿ ಕರಾವಳಿಯ ಸೃಷ್ಟಿ ಕರ್ತನ ಮೂರ್ತಿಯನ್ನೇ ನಕಲಿ ಮಾಡಿರುವುದು ಹಿಂದುತ್ವಕ್ಕೆ ಮಾಡಿದ ದ್ರೋಹ. ಹಿಂದುತ್ವಕ್ಕೆ ಯಾರೇ ದ್ರೋಹ ಮಾಡಿದರು ಕ್ಷಮೆ ಇಲ್ಲ. ಅದು ಭಯೋತ್ಪಾದನೆಗೆ ಸಮಾನ.
ಈ ದ್ರೋಹದಲ್ಲಿ ಸುನಿಲ್ ಕುಮಾರ್ ಅವರ ನೇರ ಪಾತ್ರ ಇರುವುದರಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವಂತೆ ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಶ್ಚಂದ್ರ ಹೆಗ್ಡೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು