6:49 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ

17/10/2023, 10:08

ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ.
ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಹಿಂದುತ್ವ ಉಳಿಸಿ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.
ಕಾರ್ಕಳ ಬೈಲೂರುನಲ್ಲಿ ನಿರ್ಮಾಣಗೊಂಡು ಶಾಸಕ ಸುನಿಲ್ ಕುಮಾರ್ ಅವರಿಂದ ಅಪಚಾರಕ್ಕೊಳಗಾದ ಕರಾವಳಿ ಸೃಷ್ಟಿಕರ್ತ ಪರಶುರಾಮರ ಹೊಸ ಮೂರ್ತಿಯನ್ನು ಸರಕಾರ ಶಾಸ್ತ್ರ ಪೂರ್ವಕವಾಗಿ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಧರ್ಮ ಉಳಿಸಲಿ ಎಂದು ಹೆಗ್ಡೆ ತಿಳಿಸಿದ್ದಾರೆ.
ಪರಶು ರಾಮರು ವಿಷ್ಣುವಿನ ಅವತಾರವೆತ್ತವರು. ಕಾರ್ಕಳದಲ್ಲಿ ಅಂತಹ ಪುಣ್ಯ ಪುರುಷರ ಮೂರ್ತಿ ಕಾರ್ಕಳದಲ್ಲಿ ನಿರ್ಮಾಣ ಕಂಡಾಗ ಹಿಂದೂ ಧರ್ಮದ ಎಲ್ಲರೂ ಸಂತಸ ಪಟ್ಟಿದ್ದರು.
ಎಲ್ಲಾ ಹಿಂದೂ ಸಂಘಟನೆಗಳು ಕೂಡ ಈ ವಿಚಾರ ಬಂದಾಗ ಸಂತಸ ಪಟ್ಟಿದ್ದರು. ಹೆಮ್ಮೆ ಪಟ್ಟಿದ್ದರು. ಆದರೆ ಈ ಮೂರ್ತಿಯನ್ನು ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡಿಕೊಂಡು ಬಂದವರು ನಕಲಿ ಮಾಡುತ್ತಾರೆ ಎಂದು ಕನಸಲ್ಲಿ ಕೂಡ ಎಣಿಸಿರಲಿಲ್ಲ ಎಂದು ಅವರು
ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿದೆ. ಇಂತಹ ಸಂತಸದ ದಿನಗಳಲ್ಲಿ ಕರಾವಳಿಯ ಸೃಷ್ಟಿ ಕರ್ತನ ಮೂರ್ತಿಯನ್ನೇ ನಕಲಿ ಮಾಡಿರುವುದು ಹಿಂದುತ್ವಕ್ಕೆ ಮಾಡಿದ ದ್ರೋಹ. ಹಿಂದುತ್ವಕ್ಕೆ ಯಾರೇ ದ್ರೋಹ ಮಾಡಿದರು ಕ್ಷಮೆ ಇಲ್ಲ. ಅದು ಭಯೋತ್ಪಾದನೆಗೆ ಸಮಾನ.
ಈ ದ್ರೋಹದಲ್ಲಿ ಸುನಿಲ್ ಕುಮಾರ್ ಅವರ ನೇರ ಪಾತ್ರ ಇರುವುದರಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವಂತೆ ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಶ್ಚಂದ್ರ ಹೆಗ್ಡೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು