6:37 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ

10/02/2025, 22:07

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ತಾಲೂಕು ಕೇಂದ್ರಗಳನ್ನು ರಚಿಸುವಾಗ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯೂ ಸೇರಿರುತ್ತದೆ. ಈಗಾಗಲೇ ಅಧಿವೇಶನದಲ್ಲಿ ಈ ಬಗ್ಗೆ ನಾನು ವಿವರಿಸಿ ಮಾತನಾಡಿದ್ದೇನೆ ಪರಶುರಾಂಪುರ ತಾಲೂಕನ್ನು ಮಾಡುವುದು ನನ್ನ ಸಂಕಲ್ಪ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶದಲ್ಲಿ ಚಳ್ಳಕೆರೆ ಮಾತನಾಡಿ, ನಾನು ಮೂರು ಬಾರಿ ಶಾಸಕರಾಗುವಂತೆ ಮಾಡಲು ನೀವು ಶ್ರಮ ಪಟ್ಟಿದ್ದಿರಾ. ತಾಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆಗಳು ಇವೆ ಹಾಗಾಗಿ ನಿಮ್ಮ ಹೋರಾಟಕ್ಕೆ ಶಕ್ತಿ ತುಂಬುತ್ತೇನೆ. ತಾಲೂಕು ಕೇಂದ್ರ ಮಾಡುವುದು ಮೊದಲ ಆಧ್ಯತೆ ಎಂದರು.
ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ ಮಾತನಾಡಿ, ತಾಲೂಕು ಕೇಂದ್ರ ಮಾಡುವುದು ನಮ್ಮ ದಶಕಗಳ ಹೋರಾಟವಾಗಿದ್ದು, ನಮ್ಮ ಹೋರಾಟದಲ್ಲಿ ರಾಜಿ ಇಲ್ಲ. ಎಲ್ಲಾ ರೈತ ಸಂಘಟನೆಗಳು ಒಂದಾಗಿದ್ದು ಇಂದು ಅಖಂಡವಾಗಿದ್ದೇವೆ. ಶಾಸಕರು ಹೆಚ್ಚು ಜವಾಬ್ದಾರಿ ಹೊತ್ತಿದ್ದು ನಮ್ಮ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಮ್ಮ ಕಷ್ಟಗಳನ್ನು ಸರ್ಕಾರ ಹರಿಸಬೇಕು ಎಂದರು.
ಅಖಂಡ ‌ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್ ಮಾತನಾಡಿ, ರೈತರೊಂದಿಗೆ ಇಡೀ ಹೋಬಳಿಯ ಎಲ್ಲಾ ಸಂಘಟನೆಗಳು ಜೊತೆಯಾಗಿವೆ. ನಾವು ಅಭಿವೃದ್ಧಿ ಯಾಗಲು ತಾಲೂಕು ಆಗಬೇಕು ಮತ್ತು ತಾಲೂಕು ಸೌಕರ್ಯಗಳನ್ನು ತರಬೇಕು.ಇದಕ್ಕಾಗಿ ನಿರಂತರವಾಗಿ ಹೋರಾಟವ ಮಾಡುತ್ತೇವೆ ಎಂದರು.
ವೇದಿಕೆಯಲ್ಲಿ ವಕೀಲರು ಮತ್ತು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಅಖಂಡ ‌ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮಹಂತೇಶ್, ಪುಟ್ಟಲಿಂಗಪ್ಪ ಮತ್ತು ಅನೇಕ ಮುಖಂಡರು ಉಪಸ್ಥಿತರಿದ್ದರು.
*ಶೀಘ್ರದಲ್ಲೇ ಸಚಿವರಿಗೆ ಮನವಿ:*
ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ “ಪರಶುರಾಂಪುರ ಹೋಬಳಿ” ಕೇಂದ್ರವು ಹೊಸ ತಾಲ್ಲೂಕಾಗಲೇ ಬೇಕಾಗಿದೆ. ಇಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಬೃಹತ್ ಚಳುವಳಿಗೆ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಬೆಂಬಲ ನೀಡಿದ್ದು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು, ಈ ಭಾಗದ ವಿದ್ಯಾರ್ಥಿಗಳ ಬದುಕು ಹಸನಾಗಲು ಪರಶುರಾಂಪುರ ತಾಲೂಕು ಆಗಲೇಬೇಕು. ಜಿಲ್ಲಾ ಕೇಂದ್ರದಲ್ಲಿ ಈ ಬಗ್ಗೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಅಖಂಡ ‌ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮಹಂತೇಶ್, ಪುಟ್ಟಲಿಂಗಪ್ಪ ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು