8:13 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ

10/02/2025, 22:07

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ತಾಲೂಕು ಕೇಂದ್ರಗಳನ್ನು ರಚಿಸುವಾಗ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯೂ ಸೇರಿರುತ್ತದೆ. ಈಗಾಗಲೇ ಅಧಿವೇಶನದಲ್ಲಿ ಈ ಬಗ್ಗೆ ನಾನು ವಿವರಿಸಿ ಮಾತನಾಡಿದ್ದೇನೆ ಪರಶುರಾಂಪುರ ತಾಲೂಕನ್ನು ಮಾಡುವುದು ನನ್ನ ಸಂಕಲ್ಪ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶದಲ್ಲಿ ಚಳ್ಳಕೆರೆ ಮಾತನಾಡಿ, ನಾನು ಮೂರು ಬಾರಿ ಶಾಸಕರಾಗುವಂತೆ ಮಾಡಲು ನೀವು ಶ್ರಮ ಪಟ್ಟಿದ್ದಿರಾ. ತಾಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆಗಳು ಇವೆ ಹಾಗಾಗಿ ನಿಮ್ಮ ಹೋರಾಟಕ್ಕೆ ಶಕ್ತಿ ತುಂಬುತ್ತೇನೆ. ತಾಲೂಕು ಕೇಂದ್ರ ಮಾಡುವುದು ಮೊದಲ ಆಧ್ಯತೆ ಎಂದರು.
ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ ಮಾತನಾಡಿ, ತಾಲೂಕು ಕೇಂದ್ರ ಮಾಡುವುದು ನಮ್ಮ ದಶಕಗಳ ಹೋರಾಟವಾಗಿದ್ದು, ನಮ್ಮ ಹೋರಾಟದಲ್ಲಿ ರಾಜಿ ಇಲ್ಲ. ಎಲ್ಲಾ ರೈತ ಸಂಘಟನೆಗಳು ಒಂದಾಗಿದ್ದು ಇಂದು ಅಖಂಡವಾಗಿದ್ದೇವೆ. ಶಾಸಕರು ಹೆಚ್ಚು ಜವಾಬ್ದಾರಿ ಹೊತ್ತಿದ್ದು ನಮ್ಮ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಮ್ಮ ಕಷ್ಟಗಳನ್ನು ಸರ್ಕಾರ ಹರಿಸಬೇಕು ಎಂದರು.
ಅಖಂಡ ‌ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್ ಮಾತನಾಡಿ, ರೈತರೊಂದಿಗೆ ಇಡೀ ಹೋಬಳಿಯ ಎಲ್ಲಾ ಸಂಘಟನೆಗಳು ಜೊತೆಯಾಗಿವೆ. ನಾವು ಅಭಿವೃದ್ಧಿ ಯಾಗಲು ತಾಲೂಕು ಆಗಬೇಕು ಮತ್ತು ತಾಲೂಕು ಸೌಕರ್ಯಗಳನ್ನು ತರಬೇಕು.ಇದಕ್ಕಾಗಿ ನಿರಂತರವಾಗಿ ಹೋರಾಟವ ಮಾಡುತ್ತೇವೆ ಎಂದರು.
ವೇದಿಕೆಯಲ್ಲಿ ವಕೀಲರು ಮತ್ತು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಅಖಂಡ ‌ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮಹಂತೇಶ್, ಪುಟ್ಟಲಿಂಗಪ್ಪ ಮತ್ತು ಅನೇಕ ಮುಖಂಡರು ಉಪಸ್ಥಿತರಿದ್ದರು.
*ಶೀಘ್ರದಲ್ಲೇ ಸಚಿವರಿಗೆ ಮನವಿ:*
ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ “ಪರಶುರಾಂಪುರ ಹೋಬಳಿ” ಕೇಂದ್ರವು ಹೊಸ ತಾಲ್ಲೂಕಾಗಲೇ ಬೇಕಾಗಿದೆ. ಇಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಬೃಹತ್ ಚಳುವಳಿಗೆ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಬೆಂಬಲ ನೀಡಿದ್ದು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು, ಈ ಭಾಗದ ವಿದ್ಯಾರ್ಥಿಗಳ ಬದುಕು ಹಸನಾಗಲು ಪರಶುರಾಂಪುರ ತಾಲೂಕು ಆಗಲೇಬೇಕು. ಜಿಲ್ಲಾ ಕೇಂದ್ರದಲ್ಲಿ ಈ ಬಗ್ಗೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಅಖಂಡ ‌ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮಹಂತೇಶ್, ಪುಟ್ಟಲಿಂಗಪ್ಪ ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು