10:05 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪರಶುರಾಮನ ನಕಲಿ ಮೂರ್ತಿ ಸ್ಥಾಪನೆ; ಬಿಜೆಪಿಯ ಸುನಿಲ್ ಕುಮಾರ್ ಅವರನ್ನು ತಕ್ಷಣ ಶಾಸಕ ಸ್ಥಾನದಿಂದ ಅಮಾನತುಗೊಳಿಸಿ: ಮಿಥುನ್ ರೈ ಆಗ್ರಹ

07/11/2023, 21:20

ಮಂಗಳೂರು(reporterkarnataka.com): ಕಾರ್ಕಳದ ಬೈಲೂರಿನಲ್ಲಿ ಗೋಮಾಳಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಿಸಿ ಅಲ್ಲಿ ಪರಶುರಾಮನ ನಕಲಿ ಮೂರ್ತಿ ಸ್ಥಾಪಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರನ್ನು ತಕ್ಷಣ ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಶುರಾಮ ಥೀಂ ಪಾರ್ಕ್ ಮತ್ತು ನಕಲಿ ಪ್ರತಿಮೆ ಸ್ಥಾಪನೆ ಅವ್ಯವಹಾರದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಪರಶುರಾಮನ ನೈಜ ಮೂರ್ತಿ ನಿರ್ಮಾಣ ಮಾಡಬೇಕು. ಅದು ಅವಿಭಜಿತ ದ.ಕ. ಜಿಲ್ಲೆಯ ಎಲ್ಲಿ ಬೇಕಾದರೂ ನಿರ್ಮಾಣ ಮಾಡಲಿ.
ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಆಗಿರುವ ಅನ್ಯಾಯ, ಅವ್ಯವಹಾರದ ವಿರುದ್ಧ ಧ್ವನಿ ಎತ್ತದೆ ಇದ್ದರೆ ಖಂಡಿತ ಪರಶುರಾಮನ ಶಾಪ ತಟ್ಟಬಹುದು ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ಮಿಥುನ್ ರೈ ಅವರು ಎಚ್ಚರಿಕೆ ನೀಡಿದರು.
ತಾನೊಬ್ಬ ನೈಜ ಹಿಂದೂ ಆಗಿ ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಆಗಿರುವ ಅನ್ಯಾಯದ ವಿರುದ್ಧ, ಅಧರ್ಮದ ವಿರುದ್ಧ ಹೋರಾಡಲು ಸಿದ್ಧನಿದ್ದೇನೆ. ಈ ನಿಟ್ಟಿನಲ್ಲಿ ತಾನು ಸ್ವಾಮೀಜಿಗಳನ್ನು ಹಾಗೂ ಮಠಾಧೀಶರನ್ನು ಭೇಟಿಯಾಗಿ ಅವರ ಆರ್ಶಿರ್ವಾದ ಮತ್ತು ಬೆಂಬಲ ಪಡೆಯುವ ಅಭಿಯಾನ ಆರಂಭಿಸುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು