10:03 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು