3:38 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು