3:03 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು