11:52 PM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ

25/06/2021, 08:03

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ  ಹಾಗೂ ಶ್ರೀ ಕ್ಷೇತ್ರದಿಂದ ಸಂಘಗಳ ಲಾಭಾಂಶ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾಡಿದರು.

ನಮ್ಮ ಮನೆಗಳ ಹಾಗೂ ನಾವಿರುವ ವಾಸಸ್ಥಳದಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆ ಕೈಗೊಂಡು ಮುಂಗಾರಿನ ಸಂದರ್ಭದಲ್ಲಿ ಆಗುವ ತೊಂದರೆಗಳನ್ನು ಜನರಲ್ಲಿ ಜಾಗೃತಿ ಮೂಡಿಸಿದರು.  ಮತ್ತೊಮ್ಮೆ ತಾವುಗಳು ಶುಚಿತ್ವವನ್ನು ಕಾಪಾಡಿಕೊಂಡು ಸೊಳ್ಳೆಗಳ ನಿರ್ಮೂಲನೆ ಮಾಡಿ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯವೆಂದು ತಿಳಿಸಿದರು.

ಶ್ರೀ ಕ್ಷೇತ್ರ ತಾಲ್ಲೂಕು ಕ್ಷೇತ್ರ ಅಧಿಕಾರಿ ಹೇಮಲತಾ ಹೆಗ್ಗಡೆಯವರು ಮಾತನಾಡಿದರು .
ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ಕಾರ್ಯಕ್ರಮದ ಉದ್ಘಾಟಿಸಿ ಆರೋಗ್ಯ ಸಿಬ್ಬಂದಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಗಳಾದ ರಮೇಶ್ ಸಸಿ ವಿತರಣೆ ಮಾಡಿದರು. ಪುರಸಭಾ ಅಧ್ಯಕ್ಷರಾದ ಆಶಾ, ವೇಣುಗೋಪಾಲ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು