4:36 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಪರಿಸರ ರಕ್ಷಣೆಗೆ ಕೆರೆ, ಪಾರ್ಕ್ ಅಭಿವೃದ್ಧಿಗೆ ಹಚ್ಚಿನ ಆದ್ಯತೆ: ಶಾಸಕ ಡಾ.ಭರತ್ ಶೆಟ್ಟಿ

26/12/2022, 17:39

ಸುರತ್ಕಲ್(reporterkarnataka.com): ಕೆರೆ, ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಮನಪಾ ವಾರ್ಡ್ ನಂ..7ರಲ್ಲಿ 54 ಲಕ್ಷ ರೂ.ವೆಚ್ಚದಲ್ಲಿ 7 ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕಾವೂರು ಕೆರೆ ಅಭಿವೃದ್ಧಿಯಾಗುತ್ತಿದೆ. ಬಗ್ಗುಂಡಿ ಕೆರೆಯನ್ನು ಪುನರ್ ನಿರ್ಮಿಸಲು ಬೃಹತ್ ಕಂಪನಿಗಳಿಂದ ನೆರವು ಕೋರಲಾಗಿದೆ. ಕೆರೆಯ ವಿಸ್ತೀರ್ಣ ಗುರುತಿಸಲು ಡೋನ್ ಸರ್ವೆ ಮಾಡಲಾಗುತ್ತಿದೆ. ಇಲ್ಲಿಗೆ ಹರಿದು ಬರುವ ಮಾಲಿನ್ಯ ನೀರನ್ನು ತಡೆಯಲು ಸೂಕ್ತ ಪರಿಹಾರೋಪಾಯ ಮತ್ತು ಕುಡುಂಬೂರು ಸುತ್ತಮುತ್ತಲಿನ ಕಾಲುವೆಗಳ ಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಮೇಯರ್‌ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್,ಮನಪಾ ಸದಸ್ಯ ವರುಣ್ ಚೌಟ, ಬಿಜೆಪಿ ಮಂಡಲ ಉಪಾಧ್ಯಕ್ಷ ವಿಠಲ್ ಸಾಲ್ಯಾನ್‌, ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಸುನಿಲ್ ಕುಳಾಯಿ, ಯುವಮೋರ್ಚಾ ಮಂಡಲ ಅಧ್ಯಕ್ಷ ಭರತ್‌ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖ್ ಸತೀಶ್ ದೇವಾಡಿಗ, ಮನೀಶ್, ಸಹ ಪ್ರಮುಖ್ ಸುರೇಶ್ ಸಾಲ್ಯಾನ್, ಬಿಜೆಪಿ ಪ್ರಮುಖರಾದ ಜಯಂತ್‌ ಸಾಲ್ಯಾನ್, ಜಯಂತ್ ಕರ್ಕೇರ ಆನಂದ ಭಂಡಾರಿ, ಬಾಲಕೃಷ್ಣ ಕೆಂಚನೂರ್, ಸ್ಥಳೀಯರಾದ ದೇವದಾಸ್, ಮಾಧವ, ಗೋಪಿನಾಥ್, ಶ್ರೀನಿವಾಸ್‌, ಲೋಕೋಪಯೋಗಿ ಇಲಾಖೆ
ಗುತ್ತಿಗೆದಾರರಾದ ಡೆನ್ನಿಸ್ ಲೋಬೋ ಮತ್ತಿತರರು ಉಪ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು