2:22 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪರಿಸರ ರಕ್ಷಣೆಗೆ ಕೆರೆ, ಪಾರ್ಕ್ ಅಭಿವೃದ್ಧಿಗೆ ಹಚ್ಚಿನ ಆದ್ಯತೆ: ಶಾಸಕ ಡಾ.ಭರತ್ ಶೆಟ್ಟಿ

26/12/2022, 17:39

ಸುರತ್ಕಲ್(reporterkarnataka.com): ಕೆರೆ, ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಮನಪಾ ವಾರ್ಡ್ ನಂ..7ರಲ್ಲಿ 54 ಲಕ್ಷ ರೂ.ವೆಚ್ಚದಲ್ಲಿ 7 ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕಾವೂರು ಕೆರೆ ಅಭಿವೃದ್ಧಿಯಾಗುತ್ತಿದೆ. ಬಗ್ಗುಂಡಿ ಕೆರೆಯನ್ನು ಪುನರ್ ನಿರ್ಮಿಸಲು ಬೃಹತ್ ಕಂಪನಿಗಳಿಂದ ನೆರವು ಕೋರಲಾಗಿದೆ. ಕೆರೆಯ ವಿಸ್ತೀರ್ಣ ಗುರುತಿಸಲು ಡೋನ್ ಸರ್ವೆ ಮಾಡಲಾಗುತ್ತಿದೆ. ಇಲ್ಲಿಗೆ ಹರಿದು ಬರುವ ಮಾಲಿನ್ಯ ನೀರನ್ನು ತಡೆಯಲು ಸೂಕ್ತ ಪರಿಹಾರೋಪಾಯ ಮತ್ತು ಕುಡುಂಬೂರು ಸುತ್ತಮುತ್ತಲಿನ ಕಾಲುವೆಗಳ ಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಮೇಯರ್‌ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್,ಮನಪಾ ಸದಸ್ಯ ವರುಣ್ ಚೌಟ, ಬಿಜೆಪಿ ಮಂಡಲ ಉಪಾಧ್ಯಕ್ಷ ವಿಠಲ್ ಸಾಲ್ಯಾನ್‌, ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಸುನಿಲ್ ಕುಳಾಯಿ, ಯುವಮೋರ್ಚಾ ಮಂಡಲ ಅಧ್ಯಕ್ಷ ಭರತ್‌ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖ್ ಸತೀಶ್ ದೇವಾಡಿಗ, ಮನೀಶ್, ಸಹ ಪ್ರಮುಖ್ ಸುರೇಶ್ ಸಾಲ್ಯಾನ್, ಬಿಜೆಪಿ ಪ್ರಮುಖರಾದ ಜಯಂತ್‌ ಸಾಲ್ಯಾನ್, ಜಯಂತ್ ಕರ್ಕೇರ ಆನಂದ ಭಂಡಾರಿ, ಬಾಲಕೃಷ್ಣ ಕೆಂಚನೂರ್, ಸ್ಥಳೀಯರಾದ ದೇವದಾಸ್, ಮಾಧವ, ಗೋಪಿನಾಥ್, ಶ್ರೀನಿವಾಸ್‌, ಲೋಕೋಪಯೋಗಿ ಇಲಾಖೆ
ಗುತ್ತಿಗೆದಾರರಾದ ಡೆನ್ನಿಸ್ ಲೋಬೋ ಮತ್ತಿತರರು ಉಪ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು