10:02 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ

17/06/2021, 07:40

ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ,

ನಾಗಮಂಗಲ ಸುಧಾಮೂರ್ತಿ ಮತ್ತು ಜನನಿ ಸಂಸ್ಥೆ ಹಾಗೂ ವಿಶ್ವ ಜಾನಿ ಸೇವಾ ಸಂಸ್ಥೆ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಪ್ರತಿಯೊಬ್ಬರಿಗೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊಂದು ದಿನ ಗಂಡಾಂತರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ನುಡಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಎಪಿಎಂಸಿ ಅಧ್ಯಕ್ಷ ರಮೇಶ್, ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು