3:56 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ

17/06/2021, 07:40

ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ,

ನಾಗಮಂಗಲ ಸುಧಾಮೂರ್ತಿ ಮತ್ತು ಜನನಿ ಸಂಸ್ಥೆ ಹಾಗೂ ವಿಶ್ವ ಜಾನಿ ಸೇವಾ ಸಂಸ್ಥೆ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಪ್ರತಿಯೊಬ್ಬರಿಗೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊಂದು ದಿನ ಗಂಡಾಂತರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ನುಡಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಎಪಿಎಂಸಿ ಅಧ್ಯಕ್ಷ ರಮೇಶ್, ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು